<p><strong>ನವದೆಹಲಿ</strong>: ಬಾಂಬೆ ಹೈಕೋರ್ಟ್ಗೆ ಮಹಾರಾಷ್ಟ್ರ ಹೈಕೋರ್ಟ್ ಎಂದು ಮರುನಾಮಕರಣ ಮಾಡಲು ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ.</p>.<p>ಮಹಾರಾಷ್ಟ್ರದ ಠಾಣೆಯ ವಿಶ್ರಾಂತ ನ್ಯಾಯಾಧೀಶ ವಿ.ಪಿ. ಪಾಟೀಲ್ ಎಂಬುವವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ವಿಕ್ರಂ ನಾಥ್ ಅವರಿದ್ದ ನ್ಯಾಯಪೀಠವು ತಳ್ಳಿಹಾಕಿದೆ.</p>.<p>‘ಇದು ಶಾಸಕಾಂಗವು ನಿರ್ಧರಿಸುವ ವಿಚಾರವಾಗಿದೆ. ಈ ವಿಚಾರವನ್ನು ಇಲ್ಲಿಗೆ ತರಲು ಯಾವ ಮೂಲಭೂತಹಕ್ಕಿನಿಂದಾಗಿ ನೀವು ಪೂರ್ವಗ್ರಹ ಪೀಡತರಾಗಿದ್ದೀರಿ’ ಎಂದೂ ನ್ಯಾಯಪೀಠ ಪ್ರಶ್ನಿಸಿದೆ.</p>.<p>ಹೈಕೋರ್ಟ್ಗಳಿಗೆಆಯಾ ರಾಜ್ಯದ ಹೆಸರುಗಳನ್ನಿಡಲು ಇತರ ರಾಜ್ಯಗಳ ಅಧಿಕಾರಿಗಳಿಗೂ ನಿರ್ದೇಶನ ನೀಡಬೇಕು ಎಂದು ಪಾಟೀಲ್ ಅವರು ಅರ್ಜಿಯಲ್ಲಿ ಕೋರಿದ್ದಾರೆ.</p>.<p>‘ಮಹಾರಾಷ್ಟ್ರ’ ಪದವು ಅಲ್ಲಿನ ಜನರ ಜೀವನದಲ್ಲಿ ವಿಶೇಷ ಪ್ರಾಮುಖ್ಯತೆಯನ್ನು ಪಡೆದಿರುವ ಪದವಾಗಿದೆ. ಆದ್ದರಿಂದ ಹೈಕೋರ್ಟ್ಗೆ ಈ ಹೆಸರಿಡಬೇಕು ಎಂದೂ ಅರ್ಜಿಯಲ್ಲಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಬಾಂಬೆ ಹೈಕೋರ್ಟ್ಗೆ ಮಹಾರಾಷ್ಟ್ರ ಹೈಕೋರ್ಟ್ ಎಂದು ಮರುನಾಮಕರಣ ಮಾಡಲು ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ.</p>.<p>ಮಹಾರಾಷ್ಟ್ರದ ಠಾಣೆಯ ವಿಶ್ರಾಂತ ನ್ಯಾಯಾಧೀಶ ವಿ.ಪಿ. ಪಾಟೀಲ್ ಎಂಬುವವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ವಿಕ್ರಂ ನಾಥ್ ಅವರಿದ್ದ ನ್ಯಾಯಪೀಠವು ತಳ್ಳಿಹಾಕಿದೆ.</p>.<p>‘ಇದು ಶಾಸಕಾಂಗವು ನಿರ್ಧರಿಸುವ ವಿಚಾರವಾಗಿದೆ. ಈ ವಿಚಾರವನ್ನು ಇಲ್ಲಿಗೆ ತರಲು ಯಾವ ಮೂಲಭೂತಹಕ್ಕಿನಿಂದಾಗಿ ನೀವು ಪೂರ್ವಗ್ರಹ ಪೀಡತರಾಗಿದ್ದೀರಿ’ ಎಂದೂ ನ್ಯಾಯಪೀಠ ಪ್ರಶ್ನಿಸಿದೆ.</p>.<p>ಹೈಕೋರ್ಟ್ಗಳಿಗೆಆಯಾ ರಾಜ್ಯದ ಹೆಸರುಗಳನ್ನಿಡಲು ಇತರ ರಾಜ್ಯಗಳ ಅಧಿಕಾರಿಗಳಿಗೂ ನಿರ್ದೇಶನ ನೀಡಬೇಕು ಎಂದು ಪಾಟೀಲ್ ಅವರು ಅರ್ಜಿಯಲ್ಲಿ ಕೋರಿದ್ದಾರೆ.</p>.<p>‘ಮಹಾರಾಷ್ಟ್ರ’ ಪದವು ಅಲ್ಲಿನ ಜನರ ಜೀವನದಲ್ಲಿ ವಿಶೇಷ ಪ್ರಾಮುಖ್ಯತೆಯನ್ನು ಪಡೆದಿರುವ ಪದವಾಗಿದೆ. ಆದ್ದರಿಂದ ಹೈಕೋರ್ಟ್ಗೆ ಈ ಹೆಸರಿಡಬೇಕು ಎಂದೂ ಅರ್ಜಿಯಲ್ಲಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>