<p><strong>ನವದೆಹಲಿ:</strong> ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿ ‘ದುರ್ಬಲ ಸಾಕ್ಷಿ’ಗಳ ಅರ್ಥವಿವರಣೆಯನ್ನು ಸುಪ್ರೀಂಕೋರ್ಟ್ ಮಂಗಳವಾರ ವಿಸ್ತರಿಸಿ ಮಹತ್ವದ ಆದೇಶ ನೀಡಿದೆ.</p>.<p>ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್, ಸೂರ್ಯಕಾಂತ ಅವರಿರುವ ನ್ಯಾಯಪೀಠ, ‘ದುರ್ಬಲ ಸಾಕ್ಷಿ’ಗಳ ಅರ್ಥದ ಮರುವ್ಯಾಖ್ಯಾನ ಮಾಡಿದೆ. ‘ವಾಕ್ ಅಥವಾ ಶ್ರವಣ ದೋಷವುಳ್ಳ ವ್ಯಕ್ತಿ, ಅಥವಾ ಸಕ್ಷಮ ಕೋರ್ಟ್ ಒಪ್ಪಬಹುದಾಂತಹ ವೈಕಲ್ಯ ಹೊಂದಿರುವ ವ್ಯಕ್ತಿಯನ್ನು ‘ದುರ್ಬಲ ಸಾಕ್ಷಿ’ ಎಂಬುದಾಗಿ ಪರಿಗಣಿಸಬಹುದು’ ಎಂದು ನ್ಯಾಯಪೀಠ ಹೇಳಿದೆ.</p>.<p>ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರು ಹಾಗೂ ಮಾನಸಿಕ ಕಾಯಿಲೆಯಿಂದ ಬಳಲುವವರು ಸಹ ಈ ಮರುವ್ಯಾಖ್ಯಾನದ ಪ್ರಕಾರ ಈಗ ‘ದುರ್ಬಲ ಸಾಕ್ಷಿ’ಗಳ ವ್ಯಾಪ್ತಿಗೆ ಒಳಪಡುತ್ತಾರೆ.</p>.<p>‘ದುರ್ಬಲ ಸಾಕ್ಷಿ’ಗಳು ನೀಡುವ ಹೇಳಿಕೆಗಳನ್ನು ದಾಖಲಿಸಲು ಸುರಕ್ಷಿತ ಹಾಗೂ ಮುಕ್ತ ವಾತಾವರಣವಿರುವ ಸೌಲಭ್ಯಗಳನ್ನು ಕಲ್ಪಿಸಬೇಕು. ಇದಕ್ಕಾಗಿ ಎರಡು ತಿಂಗಳ ಒಳಗಾಗಿ ಎಲ್ಲ ಹೈಕೋರ್ಟ್ಗಳು ‘ದುರ್ಬಲ ಸಾಕ್ಷಿಗಳು ಸಾಕ್ಷ್ಯ ನುಡಿಯುವ ಕೇಂದ್ರ’ಗಳನ್ನು (ವಿಡಬ್ಲ್ಯುಡಿಸಿ) ಸ್ಥಾಪಿಸುವ ಯೋಜನೆ ಜಾರಿಗೊಳಿಸಬೇಕು. ಈ ಸಂಬಂಧ ಅಧಿಸೂಚನೆ ಹೊರಡಿಸಬೇಕು’ ಎಂದೂ ನ್ಯಾಯಪೀಠ ನಿರ್ದೇಶನ ನೀಡಿತು.</p>.<p>ವಿಡಬ್ಲ್ಯುಡಿಸಿ ರಚನೆ, ಯೋಜನೆಯ ಅನುಷ್ಠಾನ, ತರಬೇತಿ ಕಾರ್ಯಕ್ರಮದ ಉಸ್ತುವಾರಿಗಾಗಿ ರಚಿಸಿರುವ ಸಮಿತಿಗೆ ಜಮ್ಮು–ಕಾಶ್ಮೀರ ಹೈಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಗೀತಾ ಮಿತ್ತಲ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ ನ್ಯಾಯಪೀಠ ಆದೇಶಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿ ‘ದುರ್ಬಲ ಸಾಕ್ಷಿ’ಗಳ ಅರ್ಥವಿವರಣೆಯನ್ನು ಸುಪ್ರೀಂಕೋರ್ಟ್ ಮಂಗಳವಾರ ವಿಸ್ತರಿಸಿ ಮಹತ್ವದ ಆದೇಶ ನೀಡಿದೆ.</p>.<p>ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್, ಸೂರ್ಯಕಾಂತ ಅವರಿರುವ ನ್ಯಾಯಪೀಠ, ‘ದುರ್ಬಲ ಸಾಕ್ಷಿ’ಗಳ ಅರ್ಥದ ಮರುವ್ಯಾಖ್ಯಾನ ಮಾಡಿದೆ. ‘ವಾಕ್ ಅಥವಾ ಶ್ರವಣ ದೋಷವುಳ್ಳ ವ್ಯಕ್ತಿ, ಅಥವಾ ಸಕ್ಷಮ ಕೋರ್ಟ್ ಒಪ್ಪಬಹುದಾಂತಹ ವೈಕಲ್ಯ ಹೊಂದಿರುವ ವ್ಯಕ್ತಿಯನ್ನು ‘ದುರ್ಬಲ ಸಾಕ್ಷಿ’ ಎಂಬುದಾಗಿ ಪರಿಗಣಿಸಬಹುದು’ ಎಂದು ನ್ಯಾಯಪೀಠ ಹೇಳಿದೆ.</p>.<p>ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರು ಹಾಗೂ ಮಾನಸಿಕ ಕಾಯಿಲೆಯಿಂದ ಬಳಲುವವರು ಸಹ ಈ ಮರುವ್ಯಾಖ್ಯಾನದ ಪ್ರಕಾರ ಈಗ ‘ದುರ್ಬಲ ಸಾಕ್ಷಿ’ಗಳ ವ್ಯಾಪ್ತಿಗೆ ಒಳಪಡುತ್ತಾರೆ.</p>.<p>‘ದುರ್ಬಲ ಸಾಕ್ಷಿ’ಗಳು ನೀಡುವ ಹೇಳಿಕೆಗಳನ್ನು ದಾಖಲಿಸಲು ಸುರಕ್ಷಿತ ಹಾಗೂ ಮುಕ್ತ ವಾತಾವರಣವಿರುವ ಸೌಲಭ್ಯಗಳನ್ನು ಕಲ್ಪಿಸಬೇಕು. ಇದಕ್ಕಾಗಿ ಎರಡು ತಿಂಗಳ ಒಳಗಾಗಿ ಎಲ್ಲ ಹೈಕೋರ್ಟ್ಗಳು ‘ದುರ್ಬಲ ಸಾಕ್ಷಿಗಳು ಸಾಕ್ಷ್ಯ ನುಡಿಯುವ ಕೇಂದ್ರ’ಗಳನ್ನು (ವಿಡಬ್ಲ್ಯುಡಿಸಿ) ಸ್ಥಾಪಿಸುವ ಯೋಜನೆ ಜಾರಿಗೊಳಿಸಬೇಕು. ಈ ಸಂಬಂಧ ಅಧಿಸೂಚನೆ ಹೊರಡಿಸಬೇಕು’ ಎಂದೂ ನ್ಯಾಯಪೀಠ ನಿರ್ದೇಶನ ನೀಡಿತು.</p>.<p>ವಿಡಬ್ಲ್ಯುಡಿಸಿ ರಚನೆ, ಯೋಜನೆಯ ಅನುಷ್ಠಾನ, ತರಬೇತಿ ಕಾರ್ಯಕ್ರಮದ ಉಸ್ತುವಾರಿಗಾಗಿ ರಚಿಸಿರುವ ಸಮಿತಿಗೆ ಜಮ್ಮು–ಕಾಶ್ಮೀರ ಹೈಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಗೀತಾ ಮಿತ್ತಲ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ ನ್ಯಾಯಪೀಠ ಆದೇಶಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>