<p class="title"><strong>ನವದೆಹಲಿ:</strong> ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಕೃಷಿಕರು ಕೋವಿಡ್ ಪರಿಸ್ಥಿತಿಯ ನಡುವೆಯೂ ದೊಡ್ಡ ಸಂಖ್ಯೆಯಲ್ಲಿ ಒಂದೇ ಕಡೆ ಸೇರುತ್ತಿರುವುದಕ್ಕೆ ಸುಪ್ರೀಂ ಕೋರ್ಟ್ ಗುರುವಾರ ಕಳವಳ ವ್ಯಕ್ತಪಡಿಸಿದೆ. ಕೋವಿಡ್ ವಿರುದ್ಧ ಈ ಪ್ರತಿಭಟನಕಾರರಿಗೆ ರಕ್ಷಣೆ ಒದಗಿಸಲಾಗಿದೆಯೇ ಎಂದೂ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ.</p>.<p class="title">ಆನಂದ್ ವಿಹಾರ್ ಬಸ್ ಟರ್ಮಿನಲ್ ಬಳಿ ಹೆಚ್ಚಿನ ಜನರ ಸೇರುವಿಕೆ ಕುರಿತು ತನಿಖೆ, ತಬ್ಲೀಗ್ ಜಮಾತ್ ಪ್ರಕರಣ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ನೀಡಲಾದ ಪರಿಹಾರ ಕುರಿತು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೈಗೊಂಡಿತ್ತು.</p>.<p class="title">‘ಕೃಷಿಕರ ಪ್ರತಿಭಟನೆಯ ವೇಳೆಯೂ ಅಂಥದೇ ಸ್ಥಿತಿ ನಿರ್ಮಾಣವಾಗಿದೆ. ಕೃಷಿಕರಿಗೆ ಕೋವಿಡ್ ವಿರುದ್ಧ ರಕ್ಷಣೆ ಸಿಗುತ್ತಿದೆಯೋ ಇಲ್ಲವೋ ತಿಳಿದಿಲ್ಲ. ಆದರೆ, ಎಲ್ಲವೂ ಮುಗಿದಿದೆ ಎಂಬ ಪರಿಸ್ಥಿತಿಯಂತೂ ಇಲ್ಲ’ ಎಂದು ಪೀಠದ ನೇತೃತ್ವ ವಹಿಸಿದ್ದ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ ಹೇಳಿದರು.</p>.<p class="title"><strong>ಓದಿ:</strong><a href="https://www.prajavani.net/india-news/farmers-protesttractor-rally-today-likely-to-disrupt-traffic-on-delhi-outskirts-794125.html" itemprop="url">ರೈತರ ಟ್ರ್ಯಾಕ್ಟರ್ ರ್ಯಾಲಿ: ದೆಹಲಿ ಹೊರ ವಲಯದಲ್ಲಿ ಟ್ರಾಫಿಕ್ ಜಾಮ್ ಸಾಧ್ಯತೆ</a></p>.<p class="title">ನ್ಯಾಯಮೂರ್ತಿಗಳಾಗಿದ್ದ ಎ.ಎಸ್.ಬೋಪಣ್ಣ ಮತ್ತು ವಿ.ರಾಮಸುಬ್ರಹ್ಮಣಿಯನ್ ಅವರು ಪೀಠದ ಇತರ ಸದಸ್ಯರು.</p>.<p>ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಪೀಠವು, ಕೃಷಿಕರಿಗೆ ಕೇಂದ್ರ ಸರ್ಕಾರವು ಕೋವಿಡ್ ವಿರುದ್ಧ ರಕ್ಷಣೆ ಒದಗಿಸಿದೆಯೇ ಎಂದು ಪ್ರಶ್ನಿಸಿದಾಗ, ಮೆಹ್ತಾ ಅವರು ‘ಖಂಡಿತವಾಗಿಯೂ ಇಲ್ಲ’ ಎಂದು ಪ್ರತಿಕ್ರಿಯಿಸಿದರು.</p>.<p>ಅರ್ಜಿದಾರರಾದ ಸುಪ್ರೀಯಾ ಪಂಡಿತಾ ಅವರು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಒಂದು ಕಡೆ ಸೇರುವುದನ್ನು ತಡೆಯುವಲ್ಲಿ ದೆಹಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ಪ್ರತಿಪಾದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong> ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಕೃಷಿಕರು ಕೋವಿಡ್ ಪರಿಸ್ಥಿತಿಯ ನಡುವೆಯೂ ದೊಡ್ಡ ಸಂಖ್ಯೆಯಲ್ಲಿ ಒಂದೇ ಕಡೆ ಸೇರುತ್ತಿರುವುದಕ್ಕೆ ಸುಪ್ರೀಂ ಕೋರ್ಟ್ ಗುರುವಾರ ಕಳವಳ ವ್ಯಕ್ತಪಡಿಸಿದೆ. ಕೋವಿಡ್ ವಿರುದ್ಧ ಈ ಪ್ರತಿಭಟನಕಾರರಿಗೆ ರಕ್ಷಣೆ ಒದಗಿಸಲಾಗಿದೆಯೇ ಎಂದೂ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ.</p>.<p class="title">ಆನಂದ್ ವಿಹಾರ್ ಬಸ್ ಟರ್ಮಿನಲ್ ಬಳಿ ಹೆಚ್ಚಿನ ಜನರ ಸೇರುವಿಕೆ ಕುರಿತು ತನಿಖೆ, ತಬ್ಲೀಗ್ ಜಮಾತ್ ಪ್ರಕರಣ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ನೀಡಲಾದ ಪರಿಹಾರ ಕುರಿತು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೈಗೊಂಡಿತ್ತು.</p>.<p class="title">‘ಕೃಷಿಕರ ಪ್ರತಿಭಟನೆಯ ವೇಳೆಯೂ ಅಂಥದೇ ಸ್ಥಿತಿ ನಿರ್ಮಾಣವಾಗಿದೆ. ಕೃಷಿಕರಿಗೆ ಕೋವಿಡ್ ವಿರುದ್ಧ ರಕ್ಷಣೆ ಸಿಗುತ್ತಿದೆಯೋ ಇಲ್ಲವೋ ತಿಳಿದಿಲ್ಲ. ಆದರೆ, ಎಲ್ಲವೂ ಮುಗಿದಿದೆ ಎಂಬ ಪರಿಸ್ಥಿತಿಯಂತೂ ಇಲ್ಲ’ ಎಂದು ಪೀಠದ ನೇತೃತ್ವ ವಹಿಸಿದ್ದ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ ಹೇಳಿದರು.</p>.<p class="title"><strong>ಓದಿ:</strong><a href="https://www.prajavani.net/india-news/farmers-protesttractor-rally-today-likely-to-disrupt-traffic-on-delhi-outskirts-794125.html" itemprop="url">ರೈತರ ಟ್ರ್ಯಾಕ್ಟರ್ ರ್ಯಾಲಿ: ದೆಹಲಿ ಹೊರ ವಲಯದಲ್ಲಿ ಟ್ರಾಫಿಕ್ ಜಾಮ್ ಸಾಧ್ಯತೆ</a></p>.<p class="title">ನ್ಯಾಯಮೂರ್ತಿಗಳಾಗಿದ್ದ ಎ.ಎಸ್.ಬೋಪಣ್ಣ ಮತ್ತು ವಿ.ರಾಮಸುಬ್ರಹ್ಮಣಿಯನ್ ಅವರು ಪೀಠದ ಇತರ ಸದಸ್ಯರು.</p>.<p>ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಪೀಠವು, ಕೃಷಿಕರಿಗೆ ಕೇಂದ್ರ ಸರ್ಕಾರವು ಕೋವಿಡ್ ವಿರುದ್ಧ ರಕ್ಷಣೆ ಒದಗಿಸಿದೆಯೇ ಎಂದು ಪ್ರಶ್ನಿಸಿದಾಗ, ಮೆಹ್ತಾ ಅವರು ‘ಖಂಡಿತವಾಗಿಯೂ ಇಲ್ಲ’ ಎಂದು ಪ್ರತಿಕ್ರಿಯಿಸಿದರು.</p>.<p>ಅರ್ಜಿದಾರರಾದ ಸುಪ್ರೀಯಾ ಪಂಡಿತಾ ಅವರು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಒಂದು ಕಡೆ ಸೇರುವುದನ್ನು ತಡೆಯುವಲ್ಲಿ ದೆಹಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ಪ್ರತಿಪಾದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>