‘ಕಳೆದ ಮೇ 2ರಂದು ವಿಚಾರಣೆ ನಡೆಸಿ, ನಿರ್ಧಾರ ತಿಳಿಸಲು ಎರಡು ತಿಂಗಳು ಅವಕಾಶ ನೀಡಲಾಗಿತ್ತು. ಆ ಅವಧಿಯೂ ಮುಗಿದಿದೆ. ಆದರೆ, ಸಂಬಂಧಪಟ್ಟವರು ಈ ಕುರಿತು ಯಾವ ನಿರ್ಧಾರವನ್ನೂ ಕೈಗೊಂಡಿಲ್ಲ ಎಂಬುದಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ.ನಟರಾಜ್ ಅವರು ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ತಿಳಿಸಲಾಗಿದೆ’ ಎಂದು ಹೇಳಿದ ನ್ಯಾಯಪೀಠ, ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿತು.