ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಜುಬೇರ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಮತ್ತು ಜೆ.ಕೆ. ಮಾಹೇಶ್ವರಿ ಅವರಿದ್ದ ರಜಾಕಾಲದ ಪೀಠ, ಉತ್ತರ ಪ್ರದೇಶ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿತು. ಪ್ರಕರಣವನ್ನು ಹೆಚ್ಚಿನ ವಿಚಾರಣೆಗಾಗಿ ಸಾಮಾನ್ಯ ಪೀಠಕ್ಕೆ ವರ್ಗಾಯಿಸಿತು.