ಕ್ರಿಮಿನಲ್ ಪ್ರಕರಣ: ಐವರು ಬಿಜೆಪಿ ಮುಖಂಡರಿಗೆ ಕೋರ್ಟ್ನಿಂದ ಮಧ್ಯಂತರ ರಕ್ಷಣೆ

ನವದೆಹಲಿ: ಕ್ರಿಮಿನಲ್ ಪ್ರಕರಣವೊಂದರಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ಐವರು ಬಿಜೆಪಿ ಮುಖಂಡರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ರಕ್ಷಣೆ ಮಂಜೂರು ಮಾಡಿ, ಅವರ ವಿರುದ್ಧ ಬಲವಂತವಾಗಿ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಪಶ್ಚಿಮ ಬಂಗಾಳ ಪೊಲೀಸರಿಗೆ ನಿರ್ದೇಶನ ನೀಡಿದೆ.
ಮುಕುಲ್ ರಾಯ್ ಮತ್ತು ಸಂಸದರಾದ ಕೈಲಾಶ್ ವಿಜಯ್ವರ್ಗೀಯ ಮತ್ತು ಅರ್ಜುನ್ ಸಿಂಗ್ ಸೇರಿದಂತೆ ಐವರು ಬಿಜೆಪಿ ಮುಖಂಡರಿಗೆ ನಾಯಾಲಯ ಮಧ್ಯಂತರ ರಕ್ಷಣೆ ಮಂಜೂರು ಮಾಡಿದೆ.
‘ರಾಜಕೀಯ ಚಟುವಟಿಕೆಗಳಿಂದ ದೂರವಿರಿಸಲು ನಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ‘ ಎಂದು ಆರೋಪಿಸಿ ಬಿಜೆಪಿ ನಾಯಕರು ಸಲ್ಲಿಸಿರುವ ಐದು ಪ್ರತ್ಯೇಕ ಅರ್ಜಿಗಳನ್ನು ಪರಿಶೀಲಿಸಿದ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ನೇತೃತ್ವದ ನ್ಯಾಯಪೀಠ, ಈ ಕುರಿತು ಪಶ್ಚಿಮ ಬಂಗಾಳ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದೆ.
ಈ ಪ್ರಕರಣದ ಮುಂದಿನ ವಿಚಾರಣೆ ನಡೆಯುವವರಗೆ ಈ ಐವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಸೂಚಿಸಿ, ವಿಚಾರಣೆಯನ್ನು ಜನವರಿ ಎರಡನೇ ವಾರಕ್ಕೆ ಮುಂದೂಡಿತು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.