<p class="title"><strong>ನವದೆಹಲಿ</strong>: ಅಶ್ಲೀಲ ಚಿತ್ರಗಳ ವಿಡಿಯೊಗಳನ್ನು ಕೆಲವು ಅಪ್ಲಿಕೇಶನ್ಗಳ ಮೂಲಕ ಬಿತ್ತರಿಸಿರುವ ಆರೋಪ ಎದುರಿಸುತ್ತಿರುವ ಉದ್ಯಮಿ, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ ಬಂಧನದಿಂದ ರಕ್ಷಣೆ ನೀಡಿದೆ.</p>.<p class="title">ಈ ಪ್ರಕರಣಕ್ಕೆ ಸಂಬಂಧಿಸಿ 2021ರ ಜುಲೈ ತಿಂಗಳಿನಲ್ಲಿ ಕುಂದ್ರಾ ಅವರನ್ನು ಬಂಧಿಸಲಾಗಿತ್ತು. ಸೆಪ್ಟೆಂಬರ್ನಲ್ಲಿ ಅವರಿಗೆ ಜಾಮೀನು ನೀಡಲಾಗಿದೆ.</p>.<p>ನಿರೀಕ್ಷಣಾ ಜಾಮೀನು ತಿರಸ್ಕರಿಸಿದ ಬಾಂಬೆ ಹೈಕೋರ್ಟ್ ಆದೇಶದ ವಿರುದ್ಧ ಕುಂದ್ರಾ ಅವರು ಸಲ್ಲಿಸಿದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿನೀತ್ ಸರನ್ ಮತ್ತು ಅನಿರುದ್ಧ ಬೋಸ್ ಅವರಿದ್ದ ನ್ಯಾಯಪೀಠವು ಬುಧವಾರ ಮಹಾರಾಷ್ಟ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತು.</p>.<p>‘ಮುಂಬೈನ ಸೈಬರ್ ಸೆಲ್ ಪೊಲೀಸರು ದಾಖಲಿಸಿರುವ ಎಫ್ಐಆರ್ಗೆ ಸಂಬಂಧಿಸಿದಂತೆ ನಾಲ್ಕು ವಾರಗಳಲ್ಲಿ ರಾಜ್ಯ ಸರ್ಕಾರ ಪ್ರತಿಕ್ರಿಯೆ ನೀಡಬೇಕು. ಈ ಮಧ್ಯೆ ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳಬಾರದು’ ಎಂದು ನ್ಯಾಯಪೀಠ ಸೂಚಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ</strong>: ಅಶ್ಲೀಲ ಚಿತ್ರಗಳ ವಿಡಿಯೊಗಳನ್ನು ಕೆಲವು ಅಪ್ಲಿಕೇಶನ್ಗಳ ಮೂಲಕ ಬಿತ್ತರಿಸಿರುವ ಆರೋಪ ಎದುರಿಸುತ್ತಿರುವ ಉದ್ಯಮಿ, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ ಬಂಧನದಿಂದ ರಕ್ಷಣೆ ನೀಡಿದೆ.</p>.<p class="title">ಈ ಪ್ರಕರಣಕ್ಕೆ ಸಂಬಂಧಿಸಿ 2021ರ ಜುಲೈ ತಿಂಗಳಿನಲ್ಲಿ ಕುಂದ್ರಾ ಅವರನ್ನು ಬಂಧಿಸಲಾಗಿತ್ತು. ಸೆಪ್ಟೆಂಬರ್ನಲ್ಲಿ ಅವರಿಗೆ ಜಾಮೀನು ನೀಡಲಾಗಿದೆ.</p>.<p>ನಿರೀಕ್ಷಣಾ ಜಾಮೀನು ತಿರಸ್ಕರಿಸಿದ ಬಾಂಬೆ ಹೈಕೋರ್ಟ್ ಆದೇಶದ ವಿರುದ್ಧ ಕುಂದ್ರಾ ಅವರು ಸಲ್ಲಿಸಿದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿನೀತ್ ಸರನ್ ಮತ್ತು ಅನಿರುದ್ಧ ಬೋಸ್ ಅವರಿದ್ದ ನ್ಯಾಯಪೀಠವು ಬುಧವಾರ ಮಹಾರಾಷ್ಟ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತು.</p>.<p>‘ಮುಂಬೈನ ಸೈಬರ್ ಸೆಲ್ ಪೊಲೀಸರು ದಾಖಲಿಸಿರುವ ಎಫ್ಐಆರ್ಗೆ ಸಂಬಂಧಿಸಿದಂತೆ ನಾಲ್ಕು ವಾರಗಳಲ್ಲಿ ರಾಜ್ಯ ಸರ್ಕಾರ ಪ್ರತಿಕ್ರಿಯೆ ನೀಡಬೇಕು. ಈ ಮಧ್ಯೆ ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳಬಾರದು’ ಎಂದು ನ್ಯಾಯಪೀಠ ಸೂಚಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>