ಈ ಆಕ್ಷೇಪಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ, ‘ನ್ಯಾಯಾಲಯ, ಈ ಸಮಿತಿಗೆ ತೀರ್ಪು ನೀಡುವ ಅಧಿಕಾರವನ್ನೇ ನೀಡಿಲ್ಲ. ಹೀಗಿದ್ದಾಗ ಇದರಲ್ಲಿ ಪಕ್ಷಪಾತದ ಪ್ರಶ್ನೆ ಎಲ್ಲಿ ಬರುತ್ತದೆ. ನೀವು ಅರ್ಥಮಾಡಿ ಕೊಂಡಿರುವ ರೀತಿ ಸರಿ ಇಲ್ಲ. ಹಾಗೆಯೇ, ಸಮಿತಿಯ ಸದಸ್ಯರು ವ್ಯಕ್ತಪಡಿಸಿರುವ ಅಭಿಪ್ರಾಯ ನಿಮಗೆ ಒಪ್ಪಿಗೆಯಾಗಿಲ್ಲ ಎಂಬ ಕಾರಣಕ್ಕೆ ಅವರನ್ನು ಬ್ರ್ಯಾಂಡ್ ಮಾಡುವುದು ಸರಿಯಲ್ಲ‘ ಎಂದು ನ್ಯಾಯಮೂರ್ತಿಗಳಾದ ಎ ಎಸ್ ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಅವರನ್ನೂ ಒಳಗೊಂಡ ನ್ಯಾಯಪೀಠ ಹೇಳಿದೆ.