<p><strong>ನವದೆಹಲಿ:</strong> ‘ಆಧಾರ್ ಕಾರ್ಡ್ನೊಂದಿಗೆ ಜೋಡಣೆಯಾಗಿಲ್ಲ’ ಎಂಬ ಕಾರಣದಿಂದ ದೇಶದಾದ್ಯಂತ 4 ಕೋಟಿಗೂ ಅಧಿಕ ಪಡಿತರ ಚೀಟಿಗಳನ್ನು ರದ್ದುಪಡಿಸಿರುವ ಕುರಿತು ಪ್ರತಿಕ್ರಿಯೆ ನೀಡುವಂತೆ ಸೂಚಿಸಿ ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಬುಧವಾರ ನೋಟಿಸ್ ಜಾರಿಗೊಳಿಸಿದೆ.</p>.<p>ಪಡಿತರ ಚೀಟಿ ರದ್ದಾಗಿದ್ದರಿಂದ ಆಹಾರ ದೊರೆಯದೇ ಹಸಿವಿನಿಂದ ಮೃತಪಟ್ಟಿದ್ದಾಳೆ ಎನ್ನಲಾದ ಜಾರ್ಖಂಡ್ನ 11 ವರ್ಷದ ಬಾಲಕಿಯ ತಾಯಿ ಕೊಯ್ಲಿ ದೇವಿ ಅವರು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬಡೆ ನೇತೃತ್ವದ ಪೀಠ ಈ ನೋಟಿಸ್ ಜಾರಿ ಮಾಡಿದೆ.</p>.<p>‘2017ರಿಂದ ಬಾಕಿ ಇರುವ ಈ ಪ್ರಕರಣ ಅತ್ಯಂತ ಗಂಭೀರವಾಗಿದ್ದು, ನಾವು ವಿಚಾರಣೆ ಆರಂಭಿಸುತ್ತೇವೆ. ಈ ಸಂಬಂಧ ನಾಲ್ಕು ವಾರಗಳೊಳಗೆ ಪ್ರತಿಕ್ರಿಯೆ ನೀಡಬೇಕು. ಅಲ್ಲದೆ, ಈ ಮೇಲ್ಮನವಿಯನ್ನು ವ್ಯತಿರಿಕ್ತವಾಗಿ ಪರಿಗಣಿಸಬಾರದು ಎಂದು ನ್ಯಾಯಪೀಠವು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.</p>.<p>ಆಧಾರ್ ಜೋಡಣೆ ಆಗಿಲ್ಲ ಎಂಬ ನೆಪ ಮುಂದಿರಿಸಿ ಕೇಂದ್ರ ಸರ್ಕಾರ ಅಂದಾಜು 3 ಕೋಟಿಯಷ್ಟು ಹಾಗೂ ಆಯಾ ರಾಜ್ಯ ಸರ್ಕಾರಗಳು ತಲಾ 10ರಿಂದ 15 ಲಕ್ಷದಷ್ಟು ಪಡಿತರ ಚೀಟಿಗಳನ್ನು ರದ್ದುಪಡಿಸಿವೆ ಎಂದು ಅರ್ಜಿದಾರರ ಪರ ವಕೀಲ ಕಾಲಿನ್ ಗೊನ್ಸಾಲ್ವೀಸ್ ತಿಳಿಸಿದ್ದಾರೆ.</p>.<p>ಬುಡಕಟ್ಟು ಜನರೇ ವಾಸಿಸುವಲ್ಲಿ ಬೆರಳಚ್ಚು (ಬಯೋಮೆಟ್ರಿಕ್) ಗುರುತಿಸುವ ಹಾಗೂ ಕಣ್ಣಿನ ಗೆರೆ ಗುರುತಿಸುವ ಐರಿಸ್ ಸ್ಕ್ಯಾನರ್ಗಳು ಕಾರ್ಯ ನಿರ್ವಹಿಸಿಲ್ಲದ ಉದಾಹರಣೆಗಳೂ ಇವೆ. ಬಯೋಮೆಟ್ರಿಕ್ ದೃಢೀಕರಣ ಮತ್ತು ಆಧಾರ್ ಜೋಡಣೆ ಇಲ್ಲದ್ದರಿಂದಲೇ ದೇಶದಾದ್ಯಂತ ಅಂದಾಜು 4 ಕೋಟಿ ಪಡಿತರ ಚೀಟಿಗಳನ್ನು ರದ್ದುಪಡಿಸಿದ್ದಾಗಿ ಕೇಂದ್ರ ಸರ್ಕಾರವೇ ಹೇಳಿಕೊಂಡಿದೆ ಎಂದು ಅವರು ಹೇಳಿದ್ದಾರೆ.</p>.<p>‘ರದ್ದಾಗಿರುವ ಪಡಿತರ ಚೀಟಿಗಳು ನಕಲಿ’ ಎಂದು ಕೇಂದ್ರ ಸರ್ಕಾರ ವಿವರಣೆ ನೀಡುತ್ತದೆ. ಆದರೆ, ಅಸಮರ್ಪಕ ಬಯೋಮೆಟ್ರಿಕ್ ವ್ಯವಸ್ಥೆ, ಆಧಾರ್ ಕಾರ್ಡ್ ದೊರೆಯದಿರುವಿಕೆ, ಗ್ರಾಮೀಣ ಪ್ರದೇಶಗಳಲ್ಲಿನ ಅಸಮರ್ಪಕ ಅಂತರ್ಜಾಲ ವ್ಯವಸ್ಥೆಯಂತಹ ತಾಂತ್ರಿಕ ಕಾರಣಗಳನ್ನು ಗಣನೆಗೆ ತೆಗೆದುಕೊಂಡಿಲ್ಲ ಎಂದು ಅವರು ದೂರಿದ್ದಾರೆ.</p>.<p>ಯಾವುದೇ ರಾಜ್ಯವೂ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಸೆಕ್ಷನ್ 14 ಹಾಗೂ ಸೆಕ್ಷನ್ 15ರ ಅಡಿ ಜಿಲ್ಲಾ ಕುಂದುಕೊರತೆ ಪರಿಹಾರ ಅಧಿಕಾರಿಯನ್ನು ನೇಮಕ ಮಾಡಿಲ್ಲ. ಬೇರೆ ಹುದ್ದೆಯಲ್ಲಿರುವ ಅಧಿಕಾರಿಗಳಿಗೆ ಈ ಕಾರ್ಯದ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ. ಹೆಚ್ಚುವರಿ ಹುದ್ದೆಗೆ ನೇಮಕವಾದ ಬಹುತೇಕ ಅಧಿಕಾರಿಗಳು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಆಹಾರ ವಿತರಣಾ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರಕ್ಕೆ ಕಾರಣರಾದವರೇ ಆಗಿದ್ದಾರೆ ಎಂದೂ ಅರ್ಜಿದಾರರು ಆರೋಪಿಸಿದ್ದಾರೆ.</p>.<p>ದೇಶದಾದ್ಯಂತ ಜಾರಿಯಲ್ಲಿರುವ ಆಹಾರ ಭದ್ರತಾ ಕಾಯ್ದೆ ಅಡಿ ಜನಸಾಮಾನ್ಯರ ಕುಂದುಕೊರತೆ ನಿವಾರಣಾ ವ್ಯವಸ್ಥೆ ಇದೆ. ಆದರೂ ಸರ್ಕಾರ ಕೈಗೊಂಡ ಕ್ರಮವನ್ನು ತಪ್ಪಾಗಿ ಗ್ರಹಿಸಿ ಈ ಅರ್ಜಿ ಸಲ್ಲಿಸಲಾಗಿದೆ ಎಂದು ಕೇಂದ್ರದ ಪರ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಅಮನ್ ಲೇಖಿ ಹೇಳಿದ್ದಾರೆ.</p>.<p>‘ಆಧಾರ್ ಇರಲಿ ಅಥವಾ ಇಲ್ಲದಿರಲಿ ಆಹಾರದ ಹಕ್ಕನ್ನು ನಿರಾಕರಿಸಲಾಗದು. ಪಡಿತರ ಚೀಟಿಗೆ ಆಧಾರ್ ಜೋಡಣೆ ಆಗಿರದಿದ್ದರೆ ಪರ್ಯಾಯ ದಾಖಲೆ ಸಲ್ಲಿಸಬಹುದು’ ಎಂಬದಾಗಿ ಕೇಂದ್ರ ಸ್ಪಷ್ಟಪಡಿಸಿತ್ತು ಎಂದು ಅವರು ಪ್ರತಿಪಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಆಧಾರ್ ಕಾರ್ಡ್ನೊಂದಿಗೆ ಜೋಡಣೆಯಾಗಿಲ್ಲ’ ಎಂಬ ಕಾರಣದಿಂದ ದೇಶದಾದ್ಯಂತ 4 ಕೋಟಿಗೂ ಅಧಿಕ ಪಡಿತರ ಚೀಟಿಗಳನ್ನು ರದ್ದುಪಡಿಸಿರುವ ಕುರಿತು ಪ್ರತಿಕ್ರಿಯೆ ನೀಡುವಂತೆ ಸೂಚಿಸಿ ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಬುಧವಾರ ನೋಟಿಸ್ ಜಾರಿಗೊಳಿಸಿದೆ.</p>.<p>ಪಡಿತರ ಚೀಟಿ ರದ್ದಾಗಿದ್ದರಿಂದ ಆಹಾರ ದೊರೆಯದೇ ಹಸಿವಿನಿಂದ ಮೃತಪಟ್ಟಿದ್ದಾಳೆ ಎನ್ನಲಾದ ಜಾರ್ಖಂಡ್ನ 11 ವರ್ಷದ ಬಾಲಕಿಯ ತಾಯಿ ಕೊಯ್ಲಿ ದೇವಿ ಅವರು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬಡೆ ನೇತೃತ್ವದ ಪೀಠ ಈ ನೋಟಿಸ್ ಜಾರಿ ಮಾಡಿದೆ.</p>.<p>‘2017ರಿಂದ ಬಾಕಿ ಇರುವ ಈ ಪ್ರಕರಣ ಅತ್ಯಂತ ಗಂಭೀರವಾಗಿದ್ದು, ನಾವು ವಿಚಾರಣೆ ಆರಂಭಿಸುತ್ತೇವೆ. ಈ ಸಂಬಂಧ ನಾಲ್ಕು ವಾರಗಳೊಳಗೆ ಪ್ರತಿಕ್ರಿಯೆ ನೀಡಬೇಕು. ಅಲ್ಲದೆ, ಈ ಮೇಲ್ಮನವಿಯನ್ನು ವ್ಯತಿರಿಕ್ತವಾಗಿ ಪರಿಗಣಿಸಬಾರದು ಎಂದು ನ್ಯಾಯಪೀಠವು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.</p>.<p>ಆಧಾರ್ ಜೋಡಣೆ ಆಗಿಲ್ಲ ಎಂಬ ನೆಪ ಮುಂದಿರಿಸಿ ಕೇಂದ್ರ ಸರ್ಕಾರ ಅಂದಾಜು 3 ಕೋಟಿಯಷ್ಟು ಹಾಗೂ ಆಯಾ ರಾಜ್ಯ ಸರ್ಕಾರಗಳು ತಲಾ 10ರಿಂದ 15 ಲಕ್ಷದಷ್ಟು ಪಡಿತರ ಚೀಟಿಗಳನ್ನು ರದ್ದುಪಡಿಸಿವೆ ಎಂದು ಅರ್ಜಿದಾರರ ಪರ ವಕೀಲ ಕಾಲಿನ್ ಗೊನ್ಸಾಲ್ವೀಸ್ ತಿಳಿಸಿದ್ದಾರೆ.</p>.<p>ಬುಡಕಟ್ಟು ಜನರೇ ವಾಸಿಸುವಲ್ಲಿ ಬೆರಳಚ್ಚು (ಬಯೋಮೆಟ್ರಿಕ್) ಗುರುತಿಸುವ ಹಾಗೂ ಕಣ್ಣಿನ ಗೆರೆ ಗುರುತಿಸುವ ಐರಿಸ್ ಸ್ಕ್ಯಾನರ್ಗಳು ಕಾರ್ಯ ನಿರ್ವಹಿಸಿಲ್ಲದ ಉದಾಹರಣೆಗಳೂ ಇವೆ. ಬಯೋಮೆಟ್ರಿಕ್ ದೃಢೀಕರಣ ಮತ್ತು ಆಧಾರ್ ಜೋಡಣೆ ಇಲ್ಲದ್ದರಿಂದಲೇ ದೇಶದಾದ್ಯಂತ ಅಂದಾಜು 4 ಕೋಟಿ ಪಡಿತರ ಚೀಟಿಗಳನ್ನು ರದ್ದುಪಡಿಸಿದ್ದಾಗಿ ಕೇಂದ್ರ ಸರ್ಕಾರವೇ ಹೇಳಿಕೊಂಡಿದೆ ಎಂದು ಅವರು ಹೇಳಿದ್ದಾರೆ.</p>.<p>‘ರದ್ದಾಗಿರುವ ಪಡಿತರ ಚೀಟಿಗಳು ನಕಲಿ’ ಎಂದು ಕೇಂದ್ರ ಸರ್ಕಾರ ವಿವರಣೆ ನೀಡುತ್ತದೆ. ಆದರೆ, ಅಸಮರ್ಪಕ ಬಯೋಮೆಟ್ರಿಕ್ ವ್ಯವಸ್ಥೆ, ಆಧಾರ್ ಕಾರ್ಡ್ ದೊರೆಯದಿರುವಿಕೆ, ಗ್ರಾಮೀಣ ಪ್ರದೇಶಗಳಲ್ಲಿನ ಅಸಮರ್ಪಕ ಅಂತರ್ಜಾಲ ವ್ಯವಸ್ಥೆಯಂತಹ ತಾಂತ್ರಿಕ ಕಾರಣಗಳನ್ನು ಗಣನೆಗೆ ತೆಗೆದುಕೊಂಡಿಲ್ಲ ಎಂದು ಅವರು ದೂರಿದ್ದಾರೆ.</p>.<p>ಯಾವುದೇ ರಾಜ್ಯವೂ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಸೆಕ್ಷನ್ 14 ಹಾಗೂ ಸೆಕ್ಷನ್ 15ರ ಅಡಿ ಜಿಲ್ಲಾ ಕುಂದುಕೊರತೆ ಪರಿಹಾರ ಅಧಿಕಾರಿಯನ್ನು ನೇಮಕ ಮಾಡಿಲ್ಲ. ಬೇರೆ ಹುದ್ದೆಯಲ್ಲಿರುವ ಅಧಿಕಾರಿಗಳಿಗೆ ಈ ಕಾರ್ಯದ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ. ಹೆಚ್ಚುವರಿ ಹುದ್ದೆಗೆ ನೇಮಕವಾದ ಬಹುತೇಕ ಅಧಿಕಾರಿಗಳು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಆಹಾರ ವಿತರಣಾ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರಕ್ಕೆ ಕಾರಣರಾದವರೇ ಆಗಿದ್ದಾರೆ ಎಂದೂ ಅರ್ಜಿದಾರರು ಆರೋಪಿಸಿದ್ದಾರೆ.</p>.<p>ದೇಶದಾದ್ಯಂತ ಜಾರಿಯಲ್ಲಿರುವ ಆಹಾರ ಭದ್ರತಾ ಕಾಯ್ದೆ ಅಡಿ ಜನಸಾಮಾನ್ಯರ ಕುಂದುಕೊರತೆ ನಿವಾರಣಾ ವ್ಯವಸ್ಥೆ ಇದೆ. ಆದರೂ ಸರ್ಕಾರ ಕೈಗೊಂಡ ಕ್ರಮವನ್ನು ತಪ್ಪಾಗಿ ಗ್ರಹಿಸಿ ಈ ಅರ್ಜಿ ಸಲ್ಲಿಸಲಾಗಿದೆ ಎಂದು ಕೇಂದ್ರದ ಪರ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಅಮನ್ ಲೇಖಿ ಹೇಳಿದ್ದಾರೆ.</p>.<p>‘ಆಧಾರ್ ಇರಲಿ ಅಥವಾ ಇಲ್ಲದಿರಲಿ ಆಹಾರದ ಹಕ್ಕನ್ನು ನಿರಾಕರಿಸಲಾಗದು. ಪಡಿತರ ಚೀಟಿಗೆ ಆಧಾರ್ ಜೋಡಣೆ ಆಗಿರದಿದ್ದರೆ ಪರ್ಯಾಯ ದಾಖಲೆ ಸಲ್ಲಿಸಬಹುದು’ ಎಂಬದಾಗಿ ಕೇಂದ್ರ ಸ್ಪಷ್ಟಪಡಿಸಿತ್ತು ಎಂದು ಅವರು ಪ್ರತಿಪಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>