ಈ ಕುರಿತು ನ್ಯಾಯಮೂರ್ತಿ ಎಸ್.ಕೆ.ಕೌಲ್ ನೇತೃತ್ವದ ಪೀಠವು ಜುಲೈ 9ರಂದ ಹೊರಡಿಸಿದ ಆದೇಶದಲ್ಲಿ, ದಯಾ ಅವರು ಮನವಿಗಳನ್ನು ಸಲ್ಲಿಸುವ ಮೂಲಕ ಹಾಗೂ ಪತ್ರಗಳನ್ನು ಬರೆಯುವ ಮೂಲಕ ಅನಗತ್ಯವಾಗಿ ನ್ಯಾಯಾಲಯದ ಅಮೂಲ್ಯ ಸಮಯವನ್ನು ಹಾಳು ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿತು. ಅಲ್ಲದೆ ನ್ಯಾಯಾಂಗ ನಿಂದನೆಯ ಕುರಿತು ನೋಟಿಸ್ ಜಾರಿಗೆ ಸೂಚಿಸಿತು.