ವಿಡಿಯೊ ಕಾನ್ಫೆರೆನ್ಸ್ ಮೂಲಕ ನಡೆದ ಈ ವಿಚಾರಣೆಯಲ್ಲಿ ಸರ್ಕಾರದ ಪರ ಹಿರಿಯ ವಕೀಲ ವಿಶ್ವನಾಥನ್ ಅವರು ಹಾಜರಾಗಿದ್ದು, ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡರು. ಜತೆಗೆ ಬಹುಪಾಲು ಪೋಷಕರು ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ಬೇಕೆಂದು ಬಯಸಿದ್ದಾರೆ. ಸಂವಿಧಾನದ ಪ್ರಕಾರ ಇದೊಂದು ಪ್ರಗತಿಪರ ಕ್ರಮ ಎಂದು ನ್ಯಾಯಾಲಯಕ್ಕೆ ತಿಳಿಸಿದರು.