<p class="title"><strong>ನವದೆಹಲಿ:</strong> ರಾಜಸ್ಥಾನದಲ್ಲಿ ಬಿಎಸ್ಪಿಯ ಆರು ಶಾಸಕರು ಕಾಂಗ್ರೆಸ್ ಶಾಸಕಾಂಗ ಪಕ್ಷದ ಜೊತೆಗೆ ವಿಲೀನಗೊಂಡ ಕುರಿತು ಪ್ರತಿಕ್ರಿಯಿಸುವಂತೆ ರಾಜಸ್ಥಾನ ವಿಧಾನಸಭೆ ಸ್ಪೀಕರ್ಗೆಸುಪ್ರಿಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.</p>.<p class="title">ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಮತ್ತು ಕೆ.ಎಂ.ಜೋಸೆಫ್ ಅವರಿದ್ದ ಪೀಠವು ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ್ದು, ವಿಧಾನಸಭೆ ಕಾರ್ಯದರ್ಶಿ ಮತ್ತು ಕಾಂಗ್ರೆಸ್ಗೆ ಪಕ್ಷಾಂತರಗೊಂಡಿದ್ದ ಎಲ್ಲ ಆರು ಶಾಸಕರಿಗೂ ನೋಟಿಸ್ ನೀಡಿತು.</p>.<p class="title">ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಮತ್ತು ಬಿಜೆಪಿ ಶಾಸಕ ಮದನ್ ದಿಲಾವರ್ ಅವರು ಈ ಕುರಿತು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿದ್ದರು. ಬಿಎಸ್ಪಿ ಶಾಸಕರ ಅನರ್ಹತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯನ್ನು ಮೂರು ತಿಂಗಳಲ್ಲಿ ಇತ್ಯರ್ಥಪಡಿಸಬೇಕು ಎಂದು ಸ್ಪೀಕರ್ ಅವರಿಗೆ ಆದೇಶಿಸಿದ್ದ ರಾಜಸ್ಥಾನ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಈ ಅರ್ಜಿಯನ್ನು ಸಲ್ಲಿಸಲಾಗಿತ್ತು.</p>.<p>ಆರು ಶಾಸಕರ ಪಕ್ಷಾಂತರದಿಂದಾಗಿ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಬಲ ವೃದ್ಧಿಯಾಗಿದ್ದು, ಅಶೋಕ್ ಗೆಹ್ಲೋಟ್ ನೇತೃತ್ವದ ಸರ್ಕಾರದ ಸ್ಥಾನವನ್ನು ಇನ್ನಷ್ಟು ಬಲಪಡಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong> ರಾಜಸ್ಥಾನದಲ್ಲಿ ಬಿಎಸ್ಪಿಯ ಆರು ಶಾಸಕರು ಕಾಂಗ್ರೆಸ್ ಶಾಸಕಾಂಗ ಪಕ್ಷದ ಜೊತೆಗೆ ವಿಲೀನಗೊಂಡ ಕುರಿತು ಪ್ರತಿಕ್ರಿಯಿಸುವಂತೆ ರಾಜಸ್ಥಾನ ವಿಧಾನಸಭೆ ಸ್ಪೀಕರ್ಗೆಸುಪ್ರಿಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.</p>.<p class="title">ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಮತ್ತು ಕೆ.ಎಂ.ಜೋಸೆಫ್ ಅವರಿದ್ದ ಪೀಠವು ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ್ದು, ವಿಧಾನಸಭೆ ಕಾರ್ಯದರ್ಶಿ ಮತ್ತು ಕಾಂಗ್ರೆಸ್ಗೆ ಪಕ್ಷಾಂತರಗೊಂಡಿದ್ದ ಎಲ್ಲ ಆರು ಶಾಸಕರಿಗೂ ನೋಟಿಸ್ ನೀಡಿತು.</p>.<p class="title">ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಮತ್ತು ಬಿಜೆಪಿ ಶಾಸಕ ಮದನ್ ದಿಲಾವರ್ ಅವರು ಈ ಕುರಿತು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿದ್ದರು. ಬಿಎಸ್ಪಿ ಶಾಸಕರ ಅನರ್ಹತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯನ್ನು ಮೂರು ತಿಂಗಳಲ್ಲಿ ಇತ್ಯರ್ಥಪಡಿಸಬೇಕು ಎಂದು ಸ್ಪೀಕರ್ ಅವರಿಗೆ ಆದೇಶಿಸಿದ್ದ ರಾಜಸ್ಥಾನ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಈ ಅರ್ಜಿಯನ್ನು ಸಲ್ಲಿಸಲಾಗಿತ್ತು.</p>.<p>ಆರು ಶಾಸಕರ ಪಕ್ಷಾಂತರದಿಂದಾಗಿ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಬಲ ವೃದ್ಧಿಯಾಗಿದ್ದು, ಅಶೋಕ್ ಗೆಹ್ಲೋಟ್ ನೇತೃತ್ವದ ಸರ್ಕಾರದ ಸ್ಥಾನವನ್ನು ಇನ್ನಷ್ಟು ಬಲಪಡಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>