ನವದೆಹಲಿ: ನ್ಯಾಯಾಂಗ ಬಂಧನಕ್ಕೆ ಬದಲಾಗಿ ಗೃಹಬಂಧನದಲ್ಲಿ ಇರಿಸುವಂತೆ ಎಲ್ಗಾರ್–ಪರಿಷತ್ ಮೊಕದ್ದಮೆಯಲ್ಲಿ ಬಂಧನಕ್ಕೊಳಗಾಗಿರುವ ಸಾಮಾಜಿಕ ಕಾರ್ಯಕರ್ತ ಗೌತಮ್ ನವ್ಲಖಾ(70) ಅವರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿ ಕುರಿತು ಪ್ರತ್ರಿಕ್ರಿಯೆ ನೀಡುವಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಮತ್ತು ಮಹಾರಾಷ್ಟ್ರ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.