<p><strong>ನವದೆಹಲಿ</strong>: ‘ಆರ್ಥಿಕ ಸ್ವಾತಂತ್ರ್ಯವು ಪ್ರತಿಯೊಬ್ಬರಿಗೂ ಸಂವಿಧಾನದ ಅಡಿ ಖಾತರಿಪಡಿಸಲಾದ ಅಮೂಲ್ಯ ಹಕ್ಕಾಗಿದೆ. ಹಾಗಾಗಿ, ಕೇಂದ್ರ ಅಥವಾ ರಾಜ್ಯ ಸರ್ಕಾರಗಳು ವೈಯಕ್ತಿಕ ಆಸ್ತಿಯನ್ನು ಅನಿರ್ದಿಷ್ಟ ಅವಧಿಗೆ ಅತಿಕ್ರಮಿಸುವುದು ಕಾನೂನುಬಾಹಿರ’ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಅಭಿಪ್ರಾಯಪಟ್ಟಿದೆ.</p>.<p>ಕೇಂದ್ರ ಸರ್ಕಾರವು ರಕ್ಷಣಾ ಉದ್ದೇಶಕ್ಕಾಗಿ ವಶಪಡಿಸಿಕೊಂಡಿರುವ ಬೆಂಗಳೂರು ದಕ್ಷಿಣ ಭಾಗದಲ್ಲಿನ 4 ಎಕರೆ ಭೂಮಿಯನ್ನು ಮರಳಿಸುವಂತೆ ಕೋರಿದ್ದ ಅರ್ಜಿಯನ್ನು ವಜಾಗೊಳಿಸಿ ರಾಜ್ಯ ಹೈಕೋರ್ಟ್ 2008ರಲ್ಲಿ ನೀಡಿದ್ದ ಆದೇಶ ಪ್ರಶ್ನಿಸಿ ಬಿ.ಕೆ. ರವಿಚಂದ್ರ ಮತ್ತಿತರರು ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದ ತೀರ್ಪಿನಲ್ಲಿ ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಹಾಗೂ ರವೀಂದ್ರ ಭಟ್ ಅವರಿದ್ದ ಪೀಠ ಈ ರೀತಿ ಹೇಳಿದೆ.</p>.<p>‘ವ್ಯಕ್ತಿಯೊಬ್ಬರ ಆಸ್ತಿಯನ್ನು ಅನಿರ್ದಿಷ್ಟ ಅವಧಿಗೆ ಸ್ವಾಧೀನಕ್ಕೆ ಪಡೆಯುವ ಹಕ್ಕು ಕೇಂದ್ರ ಅಥವಾ ರಾಜ್ಯ ಸರ್ಕಾರಗಳಿಗೆ ಇದೆ ಎಂದು ಪ್ರತಿಪಾದಿಸುವುದು ಕಾನೂನುಬಾಹಿರ ನಡೆಯೇ ಆಗಿದೆ’ ಎಂದು ತಿಳಿಸಿರುವ ನ್ಯಾಯಪೀಠ, ಅರ್ಜಿ ವಜಾಗೊಳಿಸಿರುವ ಹೈಕೋರ್ಟ್ ಆದೇಶವು ದೋಷಪೂರಿತವಾಗಿದೆ ಎಂದೂ ಹೇಳಿದೆ.</p>.<p>ಭೂಮಿಯನ್ನು ಸ್ವಾಧೀನಕ್ಕೆ ಪಡೆದು ವರ್ಷಗಳೇ ಗತಿಸಿವೆ. ಹಾಗಾಗಿ, 3 ತಿಂಗಳೊಳಗೆ ಸಂಬಂಧಿಸಿದವರಿಗೆ ಭೂಮಿಯನ್ನು ಹಸ್ತಾಂತರಿಸಬೇಕು ಎಂದು ಪೀಠವು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.</p>.<p>ಪ್ರತಿ 5 ವರ್ಷಕ್ಕೆ ಅನ್ವಯವಾಗುವಂತೆ ಪುನರಾವರ್ತಿತ ವಾರ್ಷಿಕ ಮೌಲ್ಯ ಆಧರಿಸಿ, 20 ವರ್ಷಗಳ ಅವಧಿಗೆ ಪರಿಹಾರ ಕೋರಿ ಅರ್ಜಿದಾರರು ಮೇಲ್ಮನವಿ ಸಲ್ಲಿಸಬಹುದಾಗಿದೆ ಎಂದು ಆದೇಶದಲ್ಲಿ ತಿಳಿಸಿರುವ ಪೀಠವು, ದಾವೆಯ ₹ 75,000 ವೆಚ್ಚವನ್ನು ಭರಿಸುವಂತೆಯೂ ಕೇಂದ್ರಕ್ಕೆ ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಆರ್ಥಿಕ ಸ್ವಾತಂತ್ರ್ಯವು ಪ್ರತಿಯೊಬ್ಬರಿಗೂ ಸಂವಿಧಾನದ ಅಡಿ ಖಾತರಿಪಡಿಸಲಾದ ಅಮೂಲ್ಯ ಹಕ್ಕಾಗಿದೆ. ಹಾಗಾಗಿ, ಕೇಂದ್ರ ಅಥವಾ ರಾಜ್ಯ ಸರ್ಕಾರಗಳು ವೈಯಕ್ತಿಕ ಆಸ್ತಿಯನ್ನು ಅನಿರ್ದಿಷ್ಟ ಅವಧಿಗೆ ಅತಿಕ್ರಮಿಸುವುದು ಕಾನೂನುಬಾಹಿರ’ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಅಭಿಪ್ರಾಯಪಟ್ಟಿದೆ.</p>.<p>ಕೇಂದ್ರ ಸರ್ಕಾರವು ರಕ್ಷಣಾ ಉದ್ದೇಶಕ್ಕಾಗಿ ವಶಪಡಿಸಿಕೊಂಡಿರುವ ಬೆಂಗಳೂರು ದಕ್ಷಿಣ ಭಾಗದಲ್ಲಿನ 4 ಎಕರೆ ಭೂಮಿಯನ್ನು ಮರಳಿಸುವಂತೆ ಕೋರಿದ್ದ ಅರ್ಜಿಯನ್ನು ವಜಾಗೊಳಿಸಿ ರಾಜ್ಯ ಹೈಕೋರ್ಟ್ 2008ರಲ್ಲಿ ನೀಡಿದ್ದ ಆದೇಶ ಪ್ರಶ್ನಿಸಿ ಬಿ.ಕೆ. ರವಿಚಂದ್ರ ಮತ್ತಿತರರು ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದ ತೀರ್ಪಿನಲ್ಲಿ ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಹಾಗೂ ರವೀಂದ್ರ ಭಟ್ ಅವರಿದ್ದ ಪೀಠ ಈ ರೀತಿ ಹೇಳಿದೆ.</p>.<p>‘ವ್ಯಕ್ತಿಯೊಬ್ಬರ ಆಸ್ತಿಯನ್ನು ಅನಿರ್ದಿಷ್ಟ ಅವಧಿಗೆ ಸ್ವಾಧೀನಕ್ಕೆ ಪಡೆಯುವ ಹಕ್ಕು ಕೇಂದ್ರ ಅಥವಾ ರಾಜ್ಯ ಸರ್ಕಾರಗಳಿಗೆ ಇದೆ ಎಂದು ಪ್ರತಿಪಾದಿಸುವುದು ಕಾನೂನುಬಾಹಿರ ನಡೆಯೇ ಆಗಿದೆ’ ಎಂದು ತಿಳಿಸಿರುವ ನ್ಯಾಯಪೀಠ, ಅರ್ಜಿ ವಜಾಗೊಳಿಸಿರುವ ಹೈಕೋರ್ಟ್ ಆದೇಶವು ದೋಷಪೂರಿತವಾಗಿದೆ ಎಂದೂ ಹೇಳಿದೆ.</p>.<p>ಭೂಮಿಯನ್ನು ಸ್ವಾಧೀನಕ್ಕೆ ಪಡೆದು ವರ್ಷಗಳೇ ಗತಿಸಿವೆ. ಹಾಗಾಗಿ, 3 ತಿಂಗಳೊಳಗೆ ಸಂಬಂಧಿಸಿದವರಿಗೆ ಭೂಮಿಯನ್ನು ಹಸ್ತಾಂತರಿಸಬೇಕು ಎಂದು ಪೀಠವು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.</p>.<p>ಪ್ರತಿ 5 ವರ್ಷಕ್ಕೆ ಅನ್ವಯವಾಗುವಂತೆ ಪುನರಾವರ್ತಿತ ವಾರ್ಷಿಕ ಮೌಲ್ಯ ಆಧರಿಸಿ, 20 ವರ್ಷಗಳ ಅವಧಿಗೆ ಪರಿಹಾರ ಕೋರಿ ಅರ್ಜಿದಾರರು ಮೇಲ್ಮನವಿ ಸಲ್ಲಿಸಬಹುದಾಗಿದೆ ಎಂದು ಆದೇಶದಲ್ಲಿ ತಿಳಿಸಿರುವ ಪೀಠವು, ದಾವೆಯ ₹ 75,000 ವೆಚ್ಚವನ್ನು ಭರಿಸುವಂತೆಯೂ ಕೇಂದ್ರಕ್ಕೆ ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>