ಮಂಗಳವಾರ ವಿಚಾರಣೆ ಕೈಗೆತ್ತಿಕೊಂಡ ಪೀಠದ ಮುಂದೆ, ‘ಈ ಪ್ರಕರಣದಲ್ಲಿ ಸಭಾಧ್ಯಕ್ಷರಿಗೂ ನೋಟಿಸ್ ನೀಡಬೇಕು’ ಎಂದು ಗೋಸ್ವಾಮಿ ಪರ ವಕೀಲ ಹರೀಶ್ ಸಾಳ್ವೆ ಅವರು ಕೋರಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಪೀಠ, ‘ಮುಂದಿನ ದಿನಗಳಲ್ಲಿ ಈ ವಿಷಯವಾಗಿ ನನ್ನ ಅಭಿಪ್ರಾಯವನ್ನು ಕೇಳಿಲ್ಲ ಎಂದು ಸಭಾಧ್ಯಕ್ಷರು ವಾದಿಸಬಾರದು’ ಎಂದು ಅಭಿಪ್ರಾಯಪಟ್ಟಿತು.