<p>ನವದೆಹಲಿ (ಪಿಟಿಐ): ದೇಶದಲ್ಲಿ ಎಚ್ಐವಿ ಪೀಡಿತರ ಚಿಕಿತ್ಸೆಗಾಗಿ ಬಳಸಲಾಗುವಆ್ಯಂಟಿರೆಟ್ರೊವೈರಲ್ ಔಷಧಿಯ ಕೊರತೆ ಇದೆ ಎಂದು ಆರೋಪಿಸಿ ಸಲ್ಲಿಸಲಾಗಿರುವ ಅರ್ಜಿಯೊಂದರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮಂಗಳವಾರ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ.</p>.<p>ಇಂಡಿಯನ್ ನೆಟ್ವರ್ಕ್ ಫಾರ್ ಪೀಪಲ್ ಲಿವಿಂಗ್ ವಿಥ್ ಎಚ್ಐವಿ/ಏಡ್ಸ್ ಎಂಬ ಸ್ವಯಂ ಸೇವಾ ಸಂಸ್ಥೆ (ಎನ್ಜಿಒ) ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ದ್ವಿಸದಸ್ಯ ನ್ಯಾಯಪೀಠವು ಈ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಆರೋಗ್ಯ ಸಚಿವಾಲಯ, ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ ಹಾಗೂ ಇತರರಿಗೆ ಸೂಚಿಸಿದೆ.</p>.<p>‘ದೇಶದಲ್ಲಿ ಆ್ಯಂಟಿರೆಟ್ರೊವೈರಲ್ ಔಷಧಿಯ ದಾಸ್ತಾನು ಇಲ್ಲ ಎಂದು ಅರ್ಜಿದಾರರು ದೂರಿದ್ದಾರೆ. 2021–22ನೇ ಸಾಲಿನ ಟೆಂಡರ್ ಅನ್ನು 2021ರ ಆಗಸ್ಟ್ನಲ್ಲಿ ಕರೆಯಬೇಕಾಗಿತ್ತು. ಆದರೆ ಅದನ್ನು 2021ರ ಡಿಸೆಂಬರ್ನಲ್ಲಿ ಕರೆಯಲಾಯಿತು. ಅದು ವಿಫಲವಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಎರಡು ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸಿ’ ಎಂದು ನ್ಯಾಯಪೀಠವು ನಿರ್ದೇಶಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): ದೇಶದಲ್ಲಿ ಎಚ್ಐವಿ ಪೀಡಿತರ ಚಿಕಿತ್ಸೆಗಾಗಿ ಬಳಸಲಾಗುವಆ್ಯಂಟಿರೆಟ್ರೊವೈರಲ್ ಔಷಧಿಯ ಕೊರತೆ ಇದೆ ಎಂದು ಆರೋಪಿಸಿ ಸಲ್ಲಿಸಲಾಗಿರುವ ಅರ್ಜಿಯೊಂದರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮಂಗಳವಾರ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ.</p>.<p>ಇಂಡಿಯನ್ ನೆಟ್ವರ್ಕ್ ಫಾರ್ ಪೀಪಲ್ ಲಿವಿಂಗ್ ವಿಥ್ ಎಚ್ಐವಿ/ಏಡ್ಸ್ ಎಂಬ ಸ್ವಯಂ ಸೇವಾ ಸಂಸ್ಥೆ (ಎನ್ಜಿಒ) ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ದ್ವಿಸದಸ್ಯ ನ್ಯಾಯಪೀಠವು ಈ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಆರೋಗ್ಯ ಸಚಿವಾಲಯ, ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ ಹಾಗೂ ಇತರರಿಗೆ ಸೂಚಿಸಿದೆ.</p>.<p>‘ದೇಶದಲ್ಲಿ ಆ್ಯಂಟಿರೆಟ್ರೊವೈರಲ್ ಔಷಧಿಯ ದಾಸ್ತಾನು ಇಲ್ಲ ಎಂದು ಅರ್ಜಿದಾರರು ದೂರಿದ್ದಾರೆ. 2021–22ನೇ ಸಾಲಿನ ಟೆಂಡರ್ ಅನ್ನು 2021ರ ಆಗಸ್ಟ್ನಲ್ಲಿ ಕರೆಯಬೇಕಾಗಿತ್ತು. ಆದರೆ ಅದನ್ನು 2021ರ ಡಿಸೆಂಬರ್ನಲ್ಲಿ ಕರೆಯಲಾಯಿತು. ಅದು ವಿಫಲವಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಎರಡು ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸಿ’ ಎಂದು ನ್ಯಾಯಪೀಠವು ನಿರ್ದೇಶಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>