<p class="bodytext"><strong>ನವದೆಹಲಿ: </strong>ಮಾತಿನ ಸಮಸ್ಯೆ ಇರುವ ಕಾರಣಕ್ಕಾಗಿ ವಿದ್ಯಾರ್ಥಿನಿಯೊಬ್ಬರಿಗೆ ವೈದ್ಯಕೀಯ ಪದವಿ ಪ್ರವೇಶವನ್ನು ನಿರಾಕರಿಸಲಾಗಿದೆ. ಈ ಸಂಬಂಧ ವಿದ್ಯಾರ್ಥಿನಿಯು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನ್ಯಾಯಲಯವು ಮೂರು ವಾರಗಳ ಗಡುವು ನೀಡಿದೆ.</p>.<p>ಭಾರತೀಯ ವೈದ್ಯಕೀಯ ಪರಿಷತ್ತಿನ ವೈದ್ಯಕೀಯಪದವಿ ಶಿಕ್ಷಣ ನಿಯಮ, 1997ರ ತಿದ್ದುಪಡಿ ಪ್ರಶ್ನಿಸಿ ವಿದ್ಯಾರ್ಥಿನಿಯು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್ ಮತ್ತು ಹಿಮಾ ಕೊಹ್ಲಿ ಅವರಿದ್ದ ಪೀಠವು, ಕೇಂದ್ರ ಸರ್ಕಾರ, ಭಾರತೀಯ ವೈದ್ಯಕೀಯ ಆಯೋಗ ಮತ್ತು ಇತರರಿಗೆ ನೋಟಿಸ್ ನೀಡಿದೆ.</p>.<p>ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಕಾಯ್ದೆ 2016ರಲ್ಲಿ ನಿಗದಿ ಮಾಡಿರುವಂಥ ನಿಯಮದಂತೆಯೇ ವಿದ್ಯಾರ್ಥಿನಿಗೆ ವೈದ್ಯಕೀಯ ಪದವಿ ಪ್ರವೇಶವನ್ನು ನಿರಾಕರಿಸಲಾಗಿದೆ. ವಿದ್ಯಾರ್ಥಿನಿಗೆ ಶೇ 40ರಷ್ಟು ಅಂಗವಿಲಕತೆ ಇದೆ. ಆದರೂ, ನೋಟಿಸ್ ಜಾರಿ ಮಾಡುವಂತೆ ಪೀಠ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="bodytext"><strong>ನವದೆಹಲಿ: </strong>ಮಾತಿನ ಸಮಸ್ಯೆ ಇರುವ ಕಾರಣಕ್ಕಾಗಿ ವಿದ್ಯಾರ್ಥಿನಿಯೊಬ್ಬರಿಗೆ ವೈದ್ಯಕೀಯ ಪದವಿ ಪ್ರವೇಶವನ್ನು ನಿರಾಕರಿಸಲಾಗಿದೆ. ಈ ಸಂಬಂಧ ವಿದ್ಯಾರ್ಥಿನಿಯು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನ್ಯಾಯಲಯವು ಮೂರು ವಾರಗಳ ಗಡುವು ನೀಡಿದೆ.</p>.<p>ಭಾರತೀಯ ವೈದ್ಯಕೀಯ ಪರಿಷತ್ತಿನ ವೈದ್ಯಕೀಯಪದವಿ ಶಿಕ್ಷಣ ನಿಯಮ, 1997ರ ತಿದ್ದುಪಡಿ ಪ್ರಶ್ನಿಸಿ ವಿದ್ಯಾರ್ಥಿನಿಯು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್ ಮತ್ತು ಹಿಮಾ ಕೊಹ್ಲಿ ಅವರಿದ್ದ ಪೀಠವು, ಕೇಂದ್ರ ಸರ್ಕಾರ, ಭಾರತೀಯ ವೈದ್ಯಕೀಯ ಆಯೋಗ ಮತ್ತು ಇತರರಿಗೆ ನೋಟಿಸ್ ನೀಡಿದೆ.</p>.<p>ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಕಾಯ್ದೆ 2016ರಲ್ಲಿ ನಿಗದಿ ಮಾಡಿರುವಂಥ ನಿಯಮದಂತೆಯೇ ವಿದ್ಯಾರ್ಥಿನಿಗೆ ವೈದ್ಯಕೀಯ ಪದವಿ ಪ್ರವೇಶವನ್ನು ನಿರಾಕರಿಸಲಾಗಿದೆ. ವಿದ್ಯಾರ್ಥಿನಿಗೆ ಶೇ 40ರಷ್ಟು ಅಂಗವಿಲಕತೆ ಇದೆ. ಆದರೂ, ನೋಟಿಸ್ ಜಾರಿ ಮಾಡುವಂತೆ ಪೀಠ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>