<p class="title"><strong>ನವದೆಹಲಿ:</strong> ಗುರು ಗೋವಿಂದ ಸಿಂಗ್ ಅವರ ಜಯಂತಿ ನಿಮಿತ್ತ ಸಾರ್ವಜನಿಕ ರಜೆ ಘೋಷಿಸಬೇಕು ಎಂಬ ಅರ್ಜಿಗೆ ಸಂಬಂಧಿಸಿದಂತೆ ಸುಪ್ರಿಂ ಕೋರ್ಟ್ ಸೋಮವಾರ ಕೇಂದ್ರ ಮತ್ತು ರಾಜ್ಯಗಳಿಗೆ ನೋಟಿಸ್ ಜಾರಿ ಮಾಡಿದೆ.</p>.<p class="title">ಸಿಖ್ ಸಮುದಾಯದ ಸಂಘಟನೆ ಆಲ್ ಇಂಡಿಯಾ ಶಿರೋಮಣಿ ಸಿಂಗ್ ಸಭಾ ಈ ಸಂಬಂಧ ಅರ್ಜಿ ಸಲ್ಲಿಸಿದ್ದು, ಸಾರ್ವಜನಿಕ ರಜೆ ಘೋಷಿಸುವ ಸಂಬಂಧ ದೇಶವ್ಯಾಪಿ ಏಕರೂಪ ನೀತಿ ಜಾರಿಗೊಳಿಸಬೇಕು ಎಂದು ಮನವಿ ಮಾಡಿತ್ತು.</p>.<p class="title">ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ ನೇತೃತ್ವದ ಪೀಠವು, ಈ ಕುರಿತು ಪ್ರತಿಕ್ರಿಯೆ ದಾಖಲಿಸಲು ಸೂಚಿಸಿ ನೋಟಿಸ್ ಜಾರಿ ಮಾಡಿತು.</p>.<p>ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಈ ಸಂಬಂಧ ಕೇಂದ್ರದ ನಿಲುವು ತಿಳಿಯುವುದಾಗಿ ತಿಳಿಸಿದರು. ಪೀಠ ಅರ್ಜಿಯ ವಿಚಾರಣೆಯನ್ನು ಇದೇ 29ಕ್ಕೆ ನಿಗದಿಪಡಿಸಿತು.</p>.<p>ಇದನ್ನೂ ಓದಿ:<a href="https://www.prajavani.net/india-news/media-trial-violates-law-bombay-hc-on-sushant-singh-rajput-death-case-coverage-797454.html" itemprop="url">'ಮಾಧ್ಯಮ ವಿಚಾರಣೆ' ಎಂಬುದು ನ್ಯಾಯಾಂಗ ಕಾರ್ಯನಿರ್ವಹಣೆಗೆ ಎದುರಾದ ಅಡ್ಡಿ: ಕೋರ್ಟ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong> ಗುರು ಗೋವಿಂದ ಸಿಂಗ್ ಅವರ ಜಯಂತಿ ನಿಮಿತ್ತ ಸಾರ್ವಜನಿಕ ರಜೆ ಘೋಷಿಸಬೇಕು ಎಂಬ ಅರ್ಜಿಗೆ ಸಂಬಂಧಿಸಿದಂತೆ ಸುಪ್ರಿಂ ಕೋರ್ಟ್ ಸೋಮವಾರ ಕೇಂದ್ರ ಮತ್ತು ರಾಜ್ಯಗಳಿಗೆ ನೋಟಿಸ್ ಜಾರಿ ಮಾಡಿದೆ.</p>.<p class="title">ಸಿಖ್ ಸಮುದಾಯದ ಸಂಘಟನೆ ಆಲ್ ಇಂಡಿಯಾ ಶಿರೋಮಣಿ ಸಿಂಗ್ ಸಭಾ ಈ ಸಂಬಂಧ ಅರ್ಜಿ ಸಲ್ಲಿಸಿದ್ದು, ಸಾರ್ವಜನಿಕ ರಜೆ ಘೋಷಿಸುವ ಸಂಬಂಧ ದೇಶವ್ಯಾಪಿ ಏಕರೂಪ ನೀತಿ ಜಾರಿಗೊಳಿಸಬೇಕು ಎಂದು ಮನವಿ ಮಾಡಿತ್ತು.</p>.<p class="title">ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ ನೇತೃತ್ವದ ಪೀಠವು, ಈ ಕುರಿತು ಪ್ರತಿಕ್ರಿಯೆ ದಾಖಲಿಸಲು ಸೂಚಿಸಿ ನೋಟಿಸ್ ಜಾರಿ ಮಾಡಿತು.</p>.<p>ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಈ ಸಂಬಂಧ ಕೇಂದ್ರದ ನಿಲುವು ತಿಳಿಯುವುದಾಗಿ ತಿಳಿಸಿದರು. ಪೀಠ ಅರ್ಜಿಯ ವಿಚಾರಣೆಯನ್ನು ಇದೇ 29ಕ್ಕೆ ನಿಗದಿಪಡಿಸಿತು.</p>.<p>ಇದನ್ನೂ ಓದಿ:<a href="https://www.prajavani.net/india-news/media-trial-violates-law-bombay-hc-on-sushant-singh-rajput-death-case-coverage-797454.html" itemprop="url">'ಮಾಧ್ಯಮ ವಿಚಾರಣೆ' ಎಂಬುದು ನ್ಯಾಯಾಂಗ ಕಾರ್ಯನಿರ್ವಹಣೆಗೆ ಎದುರಾದ ಅಡ್ಡಿ: ಕೋರ್ಟ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>