ಸಾರ್ವಜನಿಕ ರಜೆ ಘೋಷಣೆ: ಕೇಂದ್ರ, ರಾಜ್ಯಗಳಿಗೆ ಸುಪ್ರೀಂ ನೋಟಿಸ್

ನವದೆಹಲಿ: ಗುರು ಗೋವಿಂದ ಸಿಂಗ್ ಅವರ ಜಯಂತಿ ನಿಮಿತ್ತ ಸಾರ್ವಜನಿಕ ರಜೆ ಘೋಷಿಸಬೇಕು ಎಂಬ ಅರ್ಜಿಗೆ ಸಂಬಂಧಿಸಿದಂತೆ ಸುಪ್ರಿಂ ಕೋರ್ಟ್ ಸೋಮವಾರ ಕೇಂದ್ರ ಮತ್ತು ರಾಜ್ಯಗಳಿಗೆ ನೋಟಿಸ್ ಜಾರಿ ಮಾಡಿದೆ.
ಸಿಖ್ ಸಮುದಾಯದ ಸಂಘಟನೆ ಆಲ್ ಇಂಡಿಯಾ ಶಿರೋಮಣಿ ಸಿಂಗ್ ಸಭಾ ಈ ಸಂಬಂಧ ಅರ್ಜಿ ಸಲ್ಲಿಸಿದ್ದು, ಸಾರ್ವಜನಿಕ ರಜೆ ಘೋಷಿಸುವ ಸಂಬಂಧ ದೇಶವ್ಯಾಪಿ ಏಕರೂಪ ನೀತಿ ಜಾರಿಗೊಳಿಸಬೇಕು ಎಂದು ಮನವಿ ಮಾಡಿತ್ತು.
ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ ನೇತೃತ್ವದ ಪೀಠವು, ಈ ಕುರಿತು ಪ್ರತಿಕ್ರಿಯೆ ದಾಖಲಿಸಲು ಸೂಚಿಸಿ ನೋಟಿಸ್ ಜಾರಿ ಮಾಡಿತು.
ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಈ ಸಂಬಂಧ ಕೇಂದ್ರದ ನಿಲುವು ತಿಳಿಯುವುದಾಗಿ ತಿಳಿಸಿದರು. ಪೀಠ ಅರ್ಜಿಯ ವಿಚಾರಣೆಯನ್ನು ಇದೇ 29ಕ್ಕೆ ನಿಗದಿಪಡಿಸಿತು.
ಇದನ್ನೂ ಓದಿ: 'ಮಾಧ್ಯಮ ವಿಚಾರಣೆ' ಎಂಬುದು ನ್ಯಾಯಾಂಗ ಕಾರ್ಯನಿರ್ವಹಣೆಗೆ ಎದುರಾದ ಅಡ್ಡಿ: ಕೋರ್ಟ್
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.