<p><strong>ನವದೆಹಲಿ: </strong>ಬೆಂಗಳೂರಿನ ಮಹಾಲಕ್ಷ್ಮಿಪುರದಲ್ಲಿರುವ ಕಸ ವಿಲೇವಾರಿ ಮತ್ತು ಸಂಸ್ಕರಣಾ ಘಟಕ ಮುಚ್ಚುವಂತೆ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಬಿಬಿಎಂಪಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿ ಪ್ರತಿಕ್ರಿಯೆ ಸಲ್ಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚಿಸಿದೆ.</p>.<p>ನ್ಯಾಯಮೂರ್ತಿಗಳಾದ ವಿನೀತ್ ಸರನ್ ಹಾಗೂ ಅನಿರುದ್ಧ ಬೋಸ್ ಅವರಿರುವ ನ್ಯಾಯಪೀಠ ಈ ಸೂಚನೆ ನೀಡಿದ್ದು, ಎರಡು ವಾರಗಳ ಒಳಗಾಗಿ ಉತ್ತರಿಸುವಂತೆ ನಿರ್ದೇಶನ ನೀಡಿದೆ.</p>.<p>ಘಟಕ ಇರುವ ಸ್ಥಳದಲ್ಲಿ ಬಯೋ ಮಿಥೇನೇಷನ್ ಘಟಕ ಸ್ಥಾಪಿಸಲು ಹಾಗೂ ಈ ಸ್ಥಳವನ್ನೇ ಘನ ತ್ಯಾಜ್ಯ ಸಾಗಣೆಗೆ ಬಳಸಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ತೆಗೆದುಕೊಳ್ಳದ ಕಾರಣ, ಘಟಕವನ್ನು ಸ್ಥಗಿತಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ಬಿಬಿಎಂಪಿಗೆ ನಿರ್ದೇಶಿಸಿತ್ತು.</p>.<p>ಮೂರು ಶಾಲೆಗಳು ಹಾಗೂ ಒಂದು ಆಸ್ಪತ್ರೆ ಸಮೀಪದಲ್ಲಿಯೇ ಈ ಘಟಕ ಇದೆ. ಘಟಕವನ್ನು ಸ್ಥಳಾಂತರಿಸಿ, ಈ ಜಾಗವನ್ನು ಮೈದಾನವನ್ನಾಗಿ ಅಭಿವೃದ್ಧಿಪಡಿಸಲು ಸಂಬಂಧಿಸಿದವರಿಗೆ ನಿರ್ದೇಶನ ನೀಡುವಂತೆ ಕೋರಿ ಸ್ಥಳೀಯ ನಿವಾಸಿಗಳು ಸಹ ಹೈಕೋರ್ಟ್ ಮೆಟ್ಟಿಲೇರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಬೆಂಗಳೂರಿನ ಮಹಾಲಕ್ಷ್ಮಿಪುರದಲ್ಲಿರುವ ಕಸ ವಿಲೇವಾರಿ ಮತ್ತು ಸಂಸ್ಕರಣಾ ಘಟಕ ಮುಚ್ಚುವಂತೆ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಬಿಬಿಎಂಪಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿ ಪ್ರತಿಕ್ರಿಯೆ ಸಲ್ಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚಿಸಿದೆ.</p>.<p>ನ್ಯಾಯಮೂರ್ತಿಗಳಾದ ವಿನೀತ್ ಸರನ್ ಹಾಗೂ ಅನಿರುದ್ಧ ಬೋಸ್ ಅವರಿರುವ ನ್ಯಾಯಪೀಠ ಈ ಸೂಚನೆ ನೀಡಿದ್ದು, ಎರಡು ವಾರಗಳ ಒಳಗಾಗಿ ಉತ್ತರಿಸುವಂತೆ ನಿರ್ದೇಶನ ನೀಡಿದೆ.</p>.<p>ಘಟಕ ಇರುವ ಸ್ಥಳದಲ್ಲಿ ಬಯೋ ಮಿಥೇನೇಷನ್ ಘಟಕ ಸ್ಥಾಪಿಸಲು ಹಾಗೂ ಈ ಸ್ಥಳವನ್ನೇ ಘನ ತ್ಯಾಜ್ಯ ಸಾಗಣೆಗೆ ಬಳಸಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ತೆಗೆದುಕೊಳ್ಳದ ಕಾರಣ, ಘಟಕವನ್ನು ಸ್ಥಗಿತಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ಬಿಬಿಎಂಪಿಗೆ ನಿರ್ದೇಶಿಸಿತ್ತು.</p>.<p>ಮೂರು ಶಾಲೆಗಳು ಹಾಗೂ ಒಂದು ಆಸ್ಪತ್ರೆ ಸಮೀಪದಲ್ಲಿಯೇ ಈ ಘಟಕ ಇದೆ. ಘಟಕವನ್ನು ಸ್ಥಳಾಂತರಿಸಿ, ಈ ಜಾಗವನ್ನು ಮೈದಾನವನ್ನಾಗಿ ಅಭಿವೃದ್ಧಿಪಡಿಸಲು ಸಂಬಂಧಿಸಿದವರಿಗೆ ನಿರ್ದೇಶನ ನೀಡುವಂತೆ ಕೋರಿ ಸ್ಥಳೀಯ ನಿವಾಸಿಗಳು ಸಹ ಹೈಕೋರ್ಟ್ ಮೆಟ್ಟಿಲೇರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>