<p class="title"><strong>ನವದೆಹಲಿ:</strong> ತುಮಕೂರಿನ ಮಾಜಿ ಮೇಯರ್, ನಗರಪಾಲಿಕೆ ಸದಸ್ಯ ಎಚ್.ರವಿಕುಮಾರ್ ಕೊಲೆ ಪ್ರಕರಣದಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿ ಸಂಬಂಧ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.</p>.<p class="title">ಕೃತ್ಯ 2018ರಲ್ಲಿ ನಡೆದಿತ್ತು. ಮಹೇಶ್ ವಿ ಅಲಿಯಾಸ್ ಅಮಾಸೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ನಾಲ್ಕು ವಾರದಲ್ಲಿ ಉತ್ತರಿಸಲು ನ್ಯಾಯಮೂರ್ತಿಗಳಾದ ವಿನೀತ್ ಸರಣ್ ಮತ್ತು ಬಿ.ವಿ.ನಾಗರತ್ನ ಅವರಿದ್ದ ಪೀಠ ತಿಳಿಸಿದೆ.</p>.<p>ಹೈಕೋರ್ಟ್ ಇವರ ಜಾಮೀನು ಅರ್ಜಿಯನ್ನು ಸೆಪ್ಟೆಂಬರ್ 10, 2020ರಲ್ಲಿ ವಜಾ ಮಾಡಿತ್ತು. ಈ ಆದೇಶದ ಸಿಂಧುತ್ವವನ್ನು ಪ್ರಶ್ನಿಸಿ ವಕೀಲ ಕೆ.ವಿ.ಮುತ್ತುಕುಮಾರ್ ಮೂಲಕ ಅರ್ಜಿ ಸಲ್ಲಿಸಲಾಗಿದೆ.</p>.<p>ಇದೇ ಪ್ರಕರಣದಲ್ಲಿ ಇತರೆ ನಾಲ್ವರಿಗೆ ಜಾಮೀನು ನೀಡಲಾಗಿದೆ. ಮೊದಲ ಆರೋಪಿಗೆ ಕೊಲೆಯಾದ ವ್ಯಕ್ತಿ ಕುರಿತು ಮಾಹಿತಿ ನೀಡಿದ್ದು ಹೊರತುಪಡಿಸಿ ನನ್ನ ವಿರುದ್ಧಗುರುತರ ಆಪಾದನೆ ಇಲ್ಲ ಎಂದು ಅರ್ಜಿದಾರರು ವಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong> ತುಮಕೂರಿನ ಮಾಜಿ ಮೇಯರ್, ನಗರಪಾಲಿಕೆ ಸದಸ್ಯ ಎಚ್.ರವಿಕುಮಾರ್ ಕೊಲೆ ಪ್ರಕರಣದಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿ ಸಂಬಂಧ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.</p>.<p class="title">ಕೃತ್ಯ 2018ರಲ್ಲಿ ನಡೆದಿತ್ತು. ಮಹೇಶ್ ವಿ ಅಲಿಯಾಸ್ ಅಮಾಸೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ನಾಲ್ಕು ವಾರದಲ್ಲಿ ಉತ್ತರಿಸಲು ನ್ಯಾಯಮೂರ್ತಿಗಳಾದ ವಿನೀತ್ ಸರಣ್ ಮತ್ತು ಬಿ.ವಿ.ನಾಗರತ್ನ ಅವರಿದ್ದ ಪೀಠ ತಿಳಿಸಿದೆ.</p>.<p>ಹೈಕೋರ್ಟ್ ಇವರ ಜಾಮೀನು ಅರ್ಜಿಯನ್ನು ಸೆಪ್ಟೆಂಬರ್ 10, 2020ರಲ್ಲಿ ವಜಾ ಮಾಡಿತ್ತು. ಈ ಆದೇಶದ ಸಿಂಧುತ್ವವನ್ನು ಪ್ರಶ್ನಿಸಿ ವಕೀಲ ಕೆ.ವಿ.ಮುತ್ತುಕುಮಾರ್ ಮೂಲಕ ಅರ್ಜಿ ಸಲ್ಲಿಸಲಾಗಿದೆ.</p>.<p>ಇದೇ ಪ್ರಕರಣದಲ್ಲಿ ಇತರೆ ನಾಲ್ವರಿಗೆ ಜಾಮೀನು ನೀಡಲಾಗಿದೆ. ಮೊದಲ ಆರೋಪಿಗೆ ಕೊಲೆಯಾದ ವ್ಯಕ್ತಿ ಕುರಿತು ಮಾಹಿತಿ ನೀಡಿದ್ದು ಹೊರತುಪಡಿಸಿ ನನ್ನ ವಿರುದ್ಧಗುರುತರ ಆಪಾದನೆ ಇಲ್ಲ ಎಂದು ಅರ್ಜಿದಾರರು ವಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>