ನವದೆಹಲಿ:ಕೊರೊನಾ ಸೋಂಕು ವ್ಯಾಪಕವಾಗುತ್ತಿರುವುದರಿಂದ ನಾಗರಿಕ ಸೇವಾ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ,ಸುಪ್ರೀಂ ಕೋರ್ಟ್ ಗುರುವಾರ ಕೇಂದ್ರ ಸರ್ಕಾರ ಮತ್ತು ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್ಸಿ) ಪ್ರತಿಕ್ರಿಯೆ ಕೋರಿದೆ.
20ಯುಪಿಎಸ್ಸಿಪರೀಕ್ಷೆ ಆಕಾಂಕ್ಷಿಗಳು ಈ ಅರ್ಜಿಯನ್ನು ಸಲ್ಲಿಸಿದ್ದು,ನಾಗರಿಕ ಸೇವಾ ಪರೀಕ್ಷೆಗಳನ್ನು ಎರಡು ಅಥವಾ ಮೂರು ತಿಂಗಳು ಮುಂದೂಡಬೇಕು. ಆ ಸಂದರ್ಭದಲ್ಲಿ ಮಳೆ, ಪ್ರವಾಹ ಪರಿಸ್ಥಿತಿಯೂ ತಗ್ಗುವುದರಿಂದ ಕೊರೊನಾ ಸೋಂಕು ಪ್ರಕರಣಗಳು ನಿಯಂತ್ರಣದಲ್ಲಿರುತ್ತದೆ ಎಂದು ತಿಳಿಸಿದ್ದಾರೆ.