‘ಎಲ್ಲಾ ಮೇಲ್ಮನವಿಗಳನ್ನು ನಾವು ಅಂಗೀಕರಿಸುತ್ತೇವೆ. ಗುಜರಾತ್ನ ಈ ಹಿಂದಿನ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಆರ್.ಬಿ.ಶ್ರೀಕುಮಾರ್, ಕೇರಳದ ಮಾಜಿ ಪೊಲೀಸ್ ಅಧಿಕಾರಿಗಳಾದ ಎಸ್.ವಿಜಯನ್ ಮತ್ತು ತಂಬಿ ಎಸ್. ದುರ್ಗಾ ದತ್ತ ಹಾಗೂ ಗುಪ್ತಚರ ಇಲಾಖೆಯ ನಿವೃತ್ತ ಅಧಿಕಾರಿ ಪಿ.ಎಸ್.ಜಯಪ್ರಕಾಶ್ ಅವರಿಗೆ ನಿರೀಕ್ಷಣಾ ಜಾಮೀನು ನೀಡಿರುವ ಹೈಕೋರ್ಟ್ ಆದೇಶ ರದ್ದು ಮಾಡಲಾಗುತ್ತದೆ. ನಿರೀಕ್ಷಣಾ ಜಾಮೀನು ಅರ್ಜಿಗಳ ಕುರಿತು ಹೊಸದಾಗಿ ವಿಚಾರಣೆ ನಡೆಸಿ ನಾಲ್ಕು ವಾರಗಳೊಳಗೆ ಸೂಕ್ತ ತೀರ್ಮಾನ ಕೈಗೊಳ್ಳುವಂತೆ ಹೈಕೋರ್ಟ್ಗೆ ಸೂಚಿಸಲಾಗುತ್ತದೆ’ ಎಂದು ನ್ಯಾಯಪೀಠ ಹೇಳಿದೆ.