ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯಾಚಾರ ಪ್ರಕರಣ: ನಟ ವಿಜಯ್‌ ಬಾಬು ಜಾಮೀನು ರದ್ಧತಿಗೆ ’ಸುಪ್ರೀಂ‘ ನಕಾರ

Last Updated 6 ಜುಲೈ 2022, 11:13 IST
ಅಕ್ಷರ ಗಾತ್ರ

ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಮಲಯಾಳಂ ಚಿತ್ರ ನಿರ್ಮಾಪಕ, ನಟ ವಿಜಯ್‌ ಬಾಬುಗೆ ಕೇರಳ ಹೈಕೋರ್ಟ್‌ ನೀಡಿರುವ ನಿರೀಕ್ಷಣಾ ಜಾಮೀನು ರದ್ದುಗೊಳಿಸಲು ನಿರಾಕರಿಸಿರುವ ಸುಪ್ರೀಂ ಕೋರ್ಟ್, ಅನುಮತಿ ಇಲ್ಲದೆ ಕೇರಳ ಬಿಟ್ಟು ತೆರಳದಂತೆ ನಟನಿಗೆ ಸೂಚನೆ ನೀಡಿದೆ.

ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ, ಜೆ.ಕೆ.ಮಹೇಶ್ವರಿ ಅವರನ್ನೊಳಗೊಂಡ ರಜಾಕಾಲದ ಪೀಠ, ಬಾಬುಗೆ ಹೈಕೋರ್ಟ್ ವಿಧಿಸಿದ್ದ ಜಾಮೀನು ಷರತ್ತುಗಳಲ್ಲಿ ಕೆಲ ಮಾರ್ಪಾಡುಗೊಳಿಸಿ, ಅಗತ್ಯವಿದ್ದರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಬಹುದು ಎಂದು ಹೇಳಿದೆ.

ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು, ಸಾಕ್ಷ್ಯ ನಾಶ ಮಾಡಬಾರದು ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಗಳ ಮೂಲಕ ಸಂತ್ರಸ್ತೆಗೆ ಕಿರುಕುಳ ನೀಡಬಾರದು ಎಂದು ಪೀಠ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT