<p><strong>ನವದೆಹಲಿ:</strong> ‘ಕೋವಿಡ್–19‘ ಚಿಕಿತ್ಸೆಗೆ ಸಂಬಂಧಿಸಿದ ಅಗತ್ಯ ವಸ್ತುಗಳ ಲಭ್ಯತೆ ಕುರಿತ ಮಾಹಿತಿ ನೀಡುವ ‘ಕೇಂದ್ರೀಕೃತ ಪೋರ್ಟಲ್‘ ನಿರ್ವಹಿಸಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.</p>.<p>ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್, ವಿಕ್ರಮ್ ನಾಥ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು, ‘ ಕೇಂದ್ರೀಕೃತ ಪೋರ್ಟಲ್ನ ಅಗತ್ಯವೂ ಸೇರಿದಂತೆ, ನಿಮ್ಮಲ್ಲಿರುವ ಈ ಸಲಹೆಗಳನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯಕ್ಕೆ ತಿಳಿಸುವಂತೆ ನಿರ್ದೇಶನ ನೀಡಿದೆ.</p>.<p>‘ಕೇಂದ್ರೀಕೃತ ಪೋರ್ಟಲ್ ಸೇರಿದಂತೆ ಅರ್ಜಿದಾರರ ಬಳಿ ಕೆಲವು ಸಲಹೆಗಳಿದ್ದು, ಅವುಗಳನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯಕ್ಕೆ ತಿಳಿಸಲು ಅರ್ಜಿದಾರರಿಗೆ ಸ್ವಾತಂತ್ರ್ಯ ನೀಡುವುದು ಸೂಕ್ತವಾಗಿದೆ‘ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.</p>.<p>‘ಅರ್ಜಿದಾರರ ಸಲಹೆಗಳನ್ನು ಸೂಕ್ತವಾದ ಹಂತದಲ್ಲಿ ಪರಿಶೀಲಿಸಬಹುದು. ಮೇಲ್ಕಂಡ ಸ್ವಾತಂತ್ರ್ಯದೊಂದಿಗೆ ಈ ಅರ್ಜಿಯನ್ನು ಹಿಂಪಡೆಯಲು ಅನುವು ಮಾಡಿಕೊಡಲಾಗಿದೆ‘ ಎಂದು ಸೋಮವಾರ ನ್ಯಾಯಾಲಯ ಹೊರಡಿಸಿದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.</p>.<p>ಕೋವಿಡ್ ಚಿಕಿತ್ಸೆಗೆ ಸಂಬಂಧಿಸಿದ ಅಗತ್ಯವಸ್ತುಗಳಾದ ಆಮ್ಲಜನಕ ಸಿಲಿಂಡರ್ಗಳು, ಆಮ್ಲಜನಕ ಸಾಂದ್ರಕಗಳು ಮತ್ತು ಔಷಧಿಗಳ ಲಭ್ಯತೆಯ ಮಾಹಿತಿ ನಿರ್ವಹಣೆಗೆ ಕೇಂದ್ರೀಕೃತ ಪೋರ್ಟಲ್ ಸ್ಥಾಪಿಸಲು ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಕೇಳಲಾಗಿತ್ತು. ದೇಹಲಿಯ ಎಸ್ಎಫ್ಎಸ್ ಸ್ಕೂಲ್ ಹಳೇ ವಿದ್ಯಾರ್ಥಿಗಳ ಸಂಘ ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ಗೆ ಸಲ್ಲಿಸಿತ್ತು.</p>.<p><a href="https://www.prajavani.net/india-news/my-statement-on-taliban-deliberately-distorted-mehbooba-865288.html" itemprop="url">ತಾಲಿಬಾನ್ ಕುರಿತ ಹೇಳಿಕೆಯನ್ನು ಉದ್ದೇಶಪೂರ್ಕವಾಗಿ ತಿರುಚಲಾಗುತ್ತಿದೆ: ಮೆಹಬೂಬಾ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಕೋವಿಡ್–19‘ ಚಿಕಿತ್ಸೆಗೆ ಸಂಬಂಧಿಸಿದ ಅಗತ್ಯ ವಸ್ತುಗಳ ಲಭ್ಯತೆ ಕುರಿತ ಮಾಹಿತಿ ನೀಡುವ ‘ಕೇಂದ್ರೀಕೃತ ಪೋರ್ಟಲ್‘ ನಿರ್ವಹಿಸಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.</p>.<p>ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್, ವಿಕ್ರಮ್ ನಾಥ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು, ‘ ಕೇಂದ್ರೀಕೃತ ಪೋರ್ಟಲ್ನ ಅಗತ್ಯವೂ ಸೇರಿದಂತೆ, ನಿಮ್ಮಲ್ಲಿರುವ ಈ ಸಲಹೆಗಳನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯಕ್ಕೆ ತಿಳಿಸುವಂತೆ ನಿರ್ದೇಶನ ನೀಡಿದೆ.</p>.<p>‘ಕೇಂದ್ರೀಕೃತ ಪೋರ್ಟಲ್ ಸೇರಿದಂತೆ ಅರ್ಜಿದಾರರ ಬಳಿ ಕೆಲವು ಸಲಹೆಗಳಿದ್ದು, ಅವುಗಳನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯಕ್ಕೆ ತಿಳಿಸಲು ಅರ್ಜಿದಾರರಿಗೆ ಸ್ವಾತಂತ್ರ್ಯ ನೀಡುವುದು ಸೂಕ್ತವಾಗಿದೆ‘ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.</p>.<p>‘ಅರ್ಜಿದಾರರ ಸಲಹೆಗಳನ್ನು ಸೂಕ್ತವಾದ ಹಂತದಲ್ಲಿ ಪರಿಶೀಲಿಸಬಹುದು. ಮೇಲ್ಕಂಡ ಸ್ವಾತಂತ್ರ್ಯದೊಂದಿಗೆ ಈ ಅರ್ಜಿಯನ್ನು ಹಿಂಪಡೆಯಲು ಅನುವು ಮಾಡಿಕೊಡಲಾಗಿದೆ‘ ಎಂದು ಸೋಮವಾರ ನ್ಯಾಯಾಲಯ ಹೊರಡಿಸಿದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.</p>.<p>ಕೋವಿಡ್ ಚಿಕಿತ್ಸೆಗೆ ಸಂಬಂಧಿಸಿದ ಅಗತ್ಯವಸ್ತುಗಳಾದ ಆಮ್ಲಜನಕ ಸಿಲಿಂಡರ್ಗಳು, ಆಮ್ಲಜನಕ ಸಾಂದ್ರಕಗಳು ಮತ್ತು ಔಷಧಿಗಳ ಲಭ್ಯತೆಯ ಮಾಹಿತಿ ನಿರ್ವಹಣೆಗೆ ಕೇಂದ್ರೀಕೃತ ಪೋರ್ಟಲ್ ಸ್ಥಾಪಿಸಲು ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಕೇಳಲಾಗಿತ್ತು. ದೇಹಲಿಯ ಎಸ್ಎಫ್ಎಸ್ ಸ್ಕೂಲ್ ಹಳೇ ವಿದ್ಯಾರ್ಥಿಗಳ ಸಂಘ ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ಗೆ ಸಲ್ಲಿಸಿತ್ತು.</p>.<p><a href="https://www.prajavani.net/india-news/my-statement-on-taliban-deliberately-distorted-mehbooba-865288.html" itemprop="url">ತಾಲಿಬಾನ್ ಕುರಿತ ಹೇಳಿಕೆಯನ್ನು ಉದ್ದೇಶಪೂರ್ಕವಾಗಿ ತಿರುಚಲಾಗುತ್ತಿದೆ: ಮೆಹಬೂಬಾ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>