<p><strong>ನವದೆಹಲಿ:</strong> ದೇಶದಲ್ಲಿರುವ ನಕಲಿ ಬಾಬಾಗಳು ಹಾಗೂ ಆಶ್ರಮಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ದುಂಪಾಲ ರಾಮರೆಡ್ಡಿ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಬುಧವಾರ ವಜಾಗೊಳಿಸಿದೆ.</p>.<p>‘ನ್ಯಾಯಾಲಯವು ವ್ಯಕ್ತಿಯೊಬ್ಬರನ್ನು ನಕಲಿ ಬಾಬಾ ಎಂದು ನಿರ್ಧರಿಸಲುಹೇಗೆ ಸಾಧ್ಯ. ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ’ ಎಂದು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ ನೇತೃತ್ವದ ತ್ರಿಸದಸ್ಯ ಪೀಠವು, ಅರ್ಜಿದಾರರ ಪರ ವಕೀಲೆ ಮೇನಕಾ ಗುರುಸ್ವಾಮಿ ಅವರಿಗೆ ತಿಳಿಸಿತು.</p>.<p>‘ಅರ್ಜಿದಾರರ ಪರ ವಕೀಲರು ಅರ್ಜಿಯನ್ನು ಹಿಂಪಡೆಯಲು ಅನುಮತಿ ಕೋರಿದ್ದಾರೆ. ಅವರಿಗೆ ಅನುಮತಿ ಕೊಡಲಾಗಿದೆ. ಈ ರಿಟ್ ಅರ್ಜಿಯನ್ನು ವಜಾಗೊಳಿಸಲಾಗಿದೆ’ ಎಂದು ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ.ಬಾಲಸುಬ್ರಮಣಿಯನ್ ಅವರಿದ್ದ ಪೀಠವು ಹೇಳಿತು.</p>.<p>‘ಅಖಿಲ ಭಾರತೀಯ ಅಕಹರಾ ಪರಿಷತ್, ನಕಲಿ ಬಾಬಾಗಳ ಪಟ್ಟಿಯನ್ನು ಸಿದ್ಧಪಡಿಸಿದೆ. ಇದರ ಆಧಾರದಲ್ಲಿ ಕ್ರಮ ಕೈಗೊಳ್ಳಬೇಕು’ ಎಂದು ಮೇನಕಾ ಅವರು ಪೀಠಕ್ಕೆ ಮನವಿ ಮಾಡಿದರು.</p>.<p>‘ಪರಿಷತ್ ತಯಾರಿಸಿರುವ ಈ ಪಟ್ಟಿಯನ್ನು ನಾವು ಹೇಗೆ ನಂಬಬೇಕು. ನಕಲಿ ಬಾಬಾಗಳನ್ನು ಮಾತನಾಡಿಸಿ ಈ ಪಟ್ಟಿ ಸಿದ್ಧಪಡಿಸಲಾಗಿದೆಯೇ ಎಂಬುದೂ ನಮಗೆ ಗೊತ್ತಿಲ್ಲ. ಬಾಬಾಗಳ ಬಗ್ಗೆ ಅಕಹರಾ ಪರಿಷತ್ ಹೊಂದಿರುವ ಅಭಿಪ್ರಾಯವಾದರೂ ಏನು ಎಂಬುದೂ ನಮಗೆ ತಿಳಿದಿಲ್ಲ. ಇದರಲ್ಲಿ ನಾವು ಮಧ್ಯಪ್ರವೇಶಿಸಲು ಆಗುವುದಿಲ್ಲ’ ಎಂದು ನ್ಯಾಯಪೀಠ ತಿಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೇಶದಲ್ಲಿರುವ ನಕಲಿ ಬಾಬಾಗಳು ಹಾಗೂ ಆಶ್ರಮಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ದುಂಪಾಲ ರಾಮರೆಡ್ಡಿ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಬುಧವಾರ ವಜಾಗೊಳಿಸಿದೆ.</p>.<p>‘ನ್ಯಾಯಾಲಯವು ವ್ಯಕ್ತಿಯೊಬ್ಬರನ್ನು ನಕಲಿ ಬಾಬಾ ಎಂದು ನಿರ್ಧರಿಸಲುಹೇಗೆ ಸಾಧ್ಯ. ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ’ ಎಂದು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ ನೇತೃತ್ವದ ತ್ರಿಸದಸ್ಯ ಪೀಠವು, ಅರ್ಜಿದಾರರ ಪರ ವಕೀಲೆ ಮೇನಕಾ ಗುರುಸ್ವಾಮಿ ಅವರಿಗೆ ತಿಳಿಸಿತು.</p>.<p>‘ಅರ್ಜಿದಾರರ ಪರ ವಕೀಲರು ಅರ್ಜಿಯನ್ನು ಹಿಂಪಡೆಯಲು ಅನುಮತಿ ಕೋರಿದ್ದಾರೆ. ಅವರಿಗೆ ಅನುಮತಿ ಕೊಡಲಾಗಿದೆ. ಈ ರಿಟ್ ಅರ್ಜಿಯನ್ನು ವಜಾಗೊಳಿಸಲಾಗಿದೆ’ ಎಂದು ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ.ಬಾಲಸುಬ್ರಮಣಿಯನ್ ಅವರಿದ್ದ ಪೀಠವು ಹೇಳಿತು.</p>.<p>‘ಅಖಿಲ ಭಾರತೀಯ ಅಕಹರಾ ಪರಿಷತ್, ನಕಲಿ ಬಾಬಾಗಳ ಪಟ್ಟಿಯನ್ನು ಸಿದ್ಧಪಡಿಸಿದೆ. ಇದರ ಆಧಾರದಲ್ಲಿ ಕ್ರಮ ಕೈಗೊಳ್ಳಬೇಕು’ ಎಂದು ಮೇನಕಾ ಅವರು ಪೀಠಕ್ಕೆ ಮನವಿ ಮಾಡಿದರು.</p>.<p>‘ಪರಿಷತ್ ತಯಾರಿಸಿರುವ ಈ ಪಟ್ಟಿಯನ್ನು ನಾವು ಹೇಗೆ ನಂಬಬೇಕು. ನಕಲಿ ಬಾಬಾಗಳನ್ನು ಮಾತನಾಡಿಸಿ ಈ ಪಟ್ಟಿ ಸಿದ್ಧಪಡಿಸಲಾಗಿದೆಯೇ ಎಂಬುದೂ ನಮಗೆ ಗೊತ್ತಿಲ್ಲ. ಬಾಬಾಗಳ ಬಗ್ಗೆ ಅಕಹರಾ ಪರಿಷತ್ ಹೊಂದಿರುವ ಅಭಿಪ್ರಾಯವಾದರೂ ಏನು ಎಂಬುದೂ ನಮಗೆ ತಿಳಿದಿಲ್ಲ. ಇದರಲ್ಲಿ ನಾವು ಮಧ್ಯಪ್ರವೇಶಿಸಲು ಆಗುವುದಿಲ್ಲ’ ಎಂದು ನ್ಯಾಯಪೀಠ ತಿಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>