<p class="title"><strong>ನವದೆಹಲಿ:</strong> ಬ್ಯಾಂಕಿಂಗ್ ವಲಯದಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಕಾರ್ಯನಿರ್ವಹಿಸದ ಸ್ವತ್ತುಗಳ (ಎನ್ಪಿಎ) ಬಗ್ಗೆ ಪರಿಶೀಲಿಸಲು ಮಾರ್ಗಸೂಚಿಗಳನ್ನು ರೂಪಿಸಲು ಸಮಿತಿ ರಚಿಸುವಂತೆ ಕೋರಿ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ್ದ ಅರ್ಜಿ ಪರಿಗಣಿಸಲು ಸುಪ್ರೀಂಕೋರ್ಟ್ ಗುರುವಾರ ನಿರಾಕರಿಸಿದೆ.</p>.<p class="title">ಇದು ಭಾರತೀಯ ರಿಸರ್ವ್ ಬ್ಯಾಂಕ್ಗೆ ಸಂಬಂಧಿಸಿದ ನೀತಿಯಾಗಿದ್ದು ಕಾರ್ಯಾಂಗದ ವ್ಯಾಪ್ತಿಗೆ ಬರುತ್ತದೆ. ಇದರಲ್ಲಿ ನ್ಯಾಯಾಂಗ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಅಭಿಪ್ರಾಯಪಟ್ಟಿದೆ.</p>.<p class="title">ಮಾರ್ಗಸೂಚಿಗಳ ಬದಲಾವಣೆ ಬಗ್ಗೆ ಆರ್ಬಿಐ ಮುಂದೆ ಪ್ರಸ್ತಾವ ಸಲ್ಲಿಸುವಂತೆ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್, ವಿಕ್ರಂ ನಾಥ್ ಮತ್ತು ಬಿ.ವಿ.ನಾಗರತ್ನ ಅವರ ಪೀಠವು ಸ್ವಾಮಿಗೆ ಸೂಚಿಸಿತು.</p>.<p class="title">‘ನಿರಂತರವಾಗಿ ಹೆಚ್ಚುತ್ತಿರುವ ಎನ್ಪಿಎಗಳಿಗೆ ನಾವು ಹೇಗೆ ಮಾರ್ಗಸೂಚಿಗಳನ್ನು ರೂಪಿಸಬಹುದು. ಆರ್ಬಿಐ ಕಾಲಕಾಲಕ್ಕೆ ಮಾರ್ಗಸೂಚಿಗಳನ್ನು ನೀಡಿದೆ. ನ್ಯಾಯಾಲಯವು ಕಾರ್ಯಾಂಗದ ಅಧಿಕಾರದಲ್ಲಿ ಮಧ್ಯ ಪ್ರವೇಶಿಸಲು ಸಾಧ್ಯವಿಲ್ಲ’ ಎಂದು ಪೀಠ ಸ್ಪಷ್ಟಪಡಿಸಿತು.</p>.<p class="bodytext">ಈ ಮುಂಚೆ ವೈಯಕ್ತಿಕವಾಗಿ ನ್ಯಾಯಾಲಯದ ಮುಂದೆ ಹಾಜರಾಗಿದ್ದ ಸ್ವಾಮಿ ಅವರು, ತಮ್ಮ ಅರ್ಜಿಯು ಬ್ಯಾಂಕಿಂಗ್ ವಲಯದಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಎನ್ಪಿಎಗಳ ಸಮಸ್ಯೆಗಳ ಕುರಿತು ಹೇಳುತ್ತದೆ. ಎನ್ಪಿಎಗಳ ಹೆಚ್ಚಳವನ್ನು ಪರಿಶೀಲಿಸಲು ನ್ಯಾಯಾಲಯ ಅಗತ್ಯ ಮಾರ್ಗಸೂಚಿಗಳನ್ನು ಸೂಚಿಸುವ ಸಮಿತಿ ರಚಿಸಬೇಕು ಎಂದು ಮನವಿ ಮಾಡಿದ್ದರು.</p>.<p class="bodytext">ಎನ್ಪಿಎಗಳಿಗೆ ಸಂಬಂಧಿಸಿದಂತೆ ಆರ್ಬಿಐ ಗೌಪ್ಯತೆಯನ್ನು ಕಾಪಾಡುತ್ತಿದೆ. ಆದ್ದರಿಂದ ನ್ಯಾಯಾಲಯ ಸಮಿತಿ ರಚಿಸಬೇಕು ಎಂದು ಸ್ವಾಮಿ ಕೋರಿದ್ದರು.</p>.<p class="bodytext">ಸರ್ಕಾರ ಮತ್ತು ಆರ್ಬಿಐ ಈ ಕುರಿತು ಕಾಲ ಕಾಲಕ್ಕೆ ಮಾರ್ಗಸೂಚಿಗಳನ್ನು ರೂಪಿಸಿವೆ ಎಂದು ಅಭಿಪ್ರಾಯಪಟ್ಟ ಪೀಠ ಅರ್ಜಿಯನ್ನು ವಿಲೇವಾರಿಗೊಳಿಸಿತು.</p>.<p class="bodytext">ಎನ್ಪಿಎಗಳಿಗೆ ಸಂಬಂಧಿಸಿ ಮಾರ್ಗಸೂಚಿಗಳನ್ನು ಮಾರ್ಪಾಡು ಮಾಡಲು ಆರ್ಬಿಐಗೆ ಪ್ರಸ್ತಾವ ಸಲ್ಲಿಸಲು ಸ್ವಾಮಿ ಅವರಿಗೆ ಸುಪ್ರೀಂಕೋರ್ಟ್ ಸಂಪೂರ್ಣ ಸ್ವಾತಂತ್ರ್ಯ ನೀಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong> ಬ್ಯಾಂಕಿಂಗ್ ವಲಯದಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಕಾರ್ಯನಿರ್ವಹಿಸದ ಸ್ವತ್ತುಗಳ (ಎನ್ಪಿಎ) ಬಗ್ಗೆ ಪರಿಶೀಲಿಸಲು ಮಾರ್ಗಸೂಚಿಗಳನ್ನು ರೂಪಿಸಲು ಸಮಿತಿ ರಚಿಸುವಂತೆ ಕೋರಿ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ್ದ ಅರ್ಜಿ ಪರಿಗಣಿಸಲು ಸುಪ್ರೀಂಕೋರ್ಟ್ ಗುರುವಾರ ನಿರಾಕರಿಸಿದೆ.</p>.<p class="title">ಇದು ಭಾರತೀಯ ರಿಸರ್ವ್ ಬ್ಯಾಂಕ್ಗೆ ಸಂಬಂಧಿಸಿದ ನೀತಿಯಾಗಿದ್ದು ಕಾರ್ಯಾಂಗದ ವ್ಯಾಪ್ತಿಗೆ ಬರುತ್ತದೆ. ಇದರಲ್ಲಿ ನ್ಯಾಯಾಂಗ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಅಭಿಪ್ರಾಯಪಟ್ಟಿದೆ.</p>.<p class="title">ಮಾರ್ಗಸೂಚಿಗಳ ಬದಲಾವಣೆ ಬಗ್ಗೆ ಆರ್ಬಿಐ ಮುಂದೆ ಪ್ರಸ್ತಾವ ಸಲ್ಲಿಸುವಂತೆ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್, ವಿಕ್ರಂ ನಾಥ್ ಮತ್ತು ಬಿ.ವಿ.ನಾಗರತ್ನ ಅವರ ಪೀಠವು ಸ್ವಾಮಿಗೆ ಸೂಚಿಸಿತು.</p>.<p class="title">‘ನಿರಂತರವಾಗಿ ಹೆಚ್ಚುತ್ತಿರುವ ಎನ್ಪಿಎಗಳಿಗೆ ನಾವು ಹೇಗೆ ಮಾರ್ಗಸೂಚಿಗಳನ್ನು ರೂಪಿಸಬಹುದು. ಆರ್ಬಿಐ ಕಾಲಕಾಲಕ್ಕೆ ಮಾರ್ಗಸೂಚಿಗಳನ್ನು ನೀಡಿದೆ. ನ್ಯಾಯಾಲಯವು ಕಾರ್ಯಾಂಗದ ಅಧಿಕಾರದಲ್ಲಿ ಮಧ್ಯ ಪ್ರವೇಶಿಸಲು ಸಾಧ್ಯವಿಲ್ಲ’ ಎಂದು ಪೀಠ ಸ್ಪಷ್ಟಪಡಿಸಿತು.</p>.<p class="bodytext">ಈ ಮುಂಚೆ ವೈಯಕ್ತಿಕವಾಗಿ ನ್ಯಾಯಾಲಯದ ಮುಂದೆ ಹಾಜರಾಗಿದ್ದ ಸ್ವಾಮಿ ಅವರು, ತಮ್ಮ ಅರ್ಜಿಯು ಬ್ಯಾಂಕಿಂಗ್ ವಲಯದಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಎನ್ಪಿಎಗಳ ಸಮಸ್ಯೆಗಳ ಕುರಿತು ಹೇಳುತ್ತದೆ. ಎನ್ಪಿಎಗಳ ಹೆಚ್ಚಳವನ್ನು ಪರಿಶೀಲಿಸಲು ನ್ಯಾಯಾಲಯ ಅಗತ್ಯ ಮಾರ್ಗಸೂಚಿಗಳನ್ನು ಸೂಚಿಸುವ ಸಮಿತಿ ರಚಿಸಬೇಕು ಎಂದು ಮನವಿ ಮಾಡಿದ್ದರು.</p>.<p class="bodytext">ಎನ್ಪಿಎಗಳಿಗೆ ಸಂಬಂಧಿಸಿದಂತೆ ಆರ್ಬಿಐ ಗೌಪ್ಯತೆಯನ್ನು ಕಾಪಾಡುತ್ತಿದೆ. ಆದ್ದರಿಂದ ನ್ಯಾಯಾಲಯ ಸಮಿತಿ ರಚಿಸಬೇಕು ಎಂದು ಸ್ವಾಮಿ ಕೋರಿದ್ದರು.</p>.<p class="bodytext">ಸರ್ಕಾರ ಮತ್ತು ಆರ್ಬಿಐ ಈ ಕುರಿತು ಕಾಲ ಕಾಲಕ್ಕೆ ಮಾರ್ಗಸೂಚಿಗಳನ್ನು ರೂಪಿಸಿವೆ ಎಂದು ಅಭಿಪ್ರಾಯಪಟ್ಟ ಪೀಠ ಅರ್ಜಿಯನ್ನು ವಿಲೇವಾರಿಗೊಳಿಸಿತು.</p>.<p class="bodytext">ಎನ್ಪಿಎಗಳಿಗೆ ಸಂಬಂಧಿಸಿ ಮಾರ್ಗಸೂಚಿಗಳನ್ನು ಮಾರ್ಪಾಡು ಮಾಡಲು ಆರ್ಬಿಐಗೆ ಪ್ರಸ್ತಾವ ಸಲ್ಲಿಸಲು ಸ್ವಾಮಿ ಅವರಿಗೆ ಸುಪ್ರೀಂಕೋರ್ಟ್ ಸಂಪೂರ್ಣ ಸ್ವಾತಂತ್ರ್ಯ ನೀಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>