ಗೌರಿ ನೇಮಕವನ್ನು ವಿರೋಧಿಸಿ ಮದ್ರಾಸ್ ಹೈಕೋರ್ಟ್ನ ಮೂವರು ವಕೀಲರು ರಿಟ್ ಅರ್ಜಿ ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್ ನೇತೃತ್ವದ ಪೀಠವು ಫೆಬ್ರವರಿ 10ಕ್ಕೆ ವಿಚಾರಣೆ ನಿಗದಿ ಮಾಡಿತ್ತು. ಗೌರಿ ಅವರ ನೇಮಕಾತಿಯ ಬಗ್ಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ ಎಂದು ಹಿರಿಯ ವಕೀಲ ರಾಜು ರಾಮಚಂದ್ರನ್ ಅವರು ಪೀಠಕ್ಕೆ ತಿಳಿಸಿದ ನಂತರ ಅರ್ಜಿಯ ವಿಚಾರಣೆಯನ್ನು ಫೆ.7ಕ್ಕೆ ಮರು ನಿಗದಿ ಮಾಡಲಾಯಿತು.