<p><strong>ನವದೆಹಲಿ:</strong>ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ಮುಂದೂಡಬೇಕು ಇಲ್ಲವೇ ರದ್ದು ಮಾಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ಮಾಡುವುದಕ್ಕೆ ಸುಪ್ರೀಂಕೋರ್ಟ್ ಬುಧವಾರ ನಿರಾಕರಿಸಿದೆ.</p>.<p>ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠ, ‘ಈ ಅರ್ಜಿಗಳ ವಿಚಾರಣೆ ನಡೆಸಲು ನಾವು ಇಚ್ಛಿಸುವುದಿಲ್ಲ. ಕೋವಿಡ್–19 ಪಿಡುಗಿನ ನಡುವೆಯೂ ನೀಟ್ ನಡೆಸಲು ಸಂಬಂಧಪಟ್ಟ ಪ್ರಾಧಿಕಾರ ಎಲ್ಲ ಸಿದ್ಧತೆಗಳನ್ನು ಮಾಡಲಿದೆ’ ಎಂದು ಹೇಳಿತು.</p>.<p>ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕೆ ನೀಟ್ ಕಡ್ಡಾಯ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ)ಸೆ. 13ರಂದು ಈ ಪರೀಕ್ಷೆಯನ್ನು ನಡೆಸಲಿದೆ.</p>.<p>ಜೆಇಇ ಮತ್ತು ನೀಟ್ ನಡೆಸುವುದಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್ ಆಗಸ್ಟ್ 17ರಂದು ತೀರ್ಪು ನೀಡಿತ್ತು. ಇದರಿಂದ ಈ ಪರೀಕ್ಷೆಗಳನ್ನು ನಡೆಸಲು ಇದ್ದ ಅಡೆತಡೆಗಳು ನಿವಾರಣೆಯಾಗಿದ್ದವು.</p>.<p>ಆಗಸ್ಟ್ 17ರಂದು ನೀಡಿದ್ದ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ಹಲವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಬಿಜೆಪಿಯೇತರ ಪಕ್ಷಗಳು ಆಡಳಿತವಿರುವ ಆರು ರಾಜ್ಯಗಳ ಸಚಿವರು ಸಹ ಈ ಸಂಬಂಧ ಅರ್ಜಿ ಸಲ್ಲಿಸಿದ್ದರು. ಸೆಪ್ಟಂಬರ್ 4ರಂದು ಸುಪ್ರೀಂಕೋರ್ಟ್ ಈ ಎಲ್ಲ ಅರ್ಜಿಗಳನ್ನು ವಜಾಗೊಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ಮುಂದೂಡಬೇಕು ಇಲ್ಲವೇ ರದ್ದು ಮಾಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ಮಾಡುವುದಕ್ಕೆ ಸುಪ್ರೀಂಕೋರ್ಟ್ ಬುಧವಾರ ನಿರಾಕರಿಸಿದೆ.</p>.<p>ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠ, ‘ಈ ಅರ್ಜಿಗಳ ವಿಚಾರಣೆ ನಡೆಸಲು ನಾವು ಇಚ್ಛಿಸುವುದಿಲ್ಲ. ಕೋವಿಡ್–19 ಪಿಡುಗಿನ ನಡುವೆಯೂ ನೀಟ್ ನಡೆಸಲು ಸಂಬಂಧಪಟ್ಟ ಪ್ರಾಧಿಕಾರ ಎಲ್ಲ ಸಿದ್ಧತೆಗಳನ್ನು ಮಾಡಲಿದೆ’ ಎಂದು ಹೇಳಿತು.</p>.<p>ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕೆ ನೀಟ್ ಕಡ್ಡಾಯ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ)ಸೆ. 13ರಂದು ಈ ಪರೀಕ್ಷೆಯನ್ನು ನಡೆಸಲಿದೆ.</p>.<p>ಜೆಇಇ ಮತ್ತು ನೀಟ್ ನಡೆಸುವುದಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್ ಆಗಸ್ಟ್ 17ರಂದು ತೀರ್ಪು ನೀಡಿತ್ತು. ಇದರಿಂದ ಈ ಪರೀಕ್ಷೆಗಳನ್ನು ನಡೆಸಲು ಇದ್ದ ಅಡೆತಡೆಗಳು ನಿವಾರಣೆಯಾಗಿದ್ದವು.</p>.<p>ಆಗಸ್ಟ್ 17ರಂದು ನೀಡಿದ್ದ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ಹಲವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಬಿಜೆಪಿಯೇತರ ಪಕ್ಷಗಳು ಆಡಳಿತವಿರುವ ಆರು ರಾಜ್ಯಗಳ ಸಚಿವರು ಸಹ ಈ ಸಂಬಂಧ ಅರ್ಜಿ ಸಲ್ಲಿಸಿದ್ದರು. ಸೆಪ್ಟಂಬರ್ 4ರಂದು ಸುಪ್ರೀಂಕೋರ್ಟ್ ಈ ಎಲ್ಲ ಅರ್ಜಿಗಳನ್ನು ವಜಾಗೊಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>