<p class="title"><strong>ನವದೆಹಲಿ: </strong>ಅಕ್ಟೋಬರ್ 4ರಂದು ನಿಗದಿಯಾಗಿರುವ ಕೇಂದ್ರ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಲು ಬುಧವಾರ ಸುಪ್ರೀಂ ಕೋರ್ಟ್ ನಿರಾಕರಿಸಿದೆ.</p>.<p class="title">2020 ಮತ್ತು 2021ರ ಯುಪಿಎಸ್ಸಿ ಪರೀಕ್ಷೆಗಳನ್ನು ಒಟ್ಟಿಗೆ ನಡೆಸಲು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನೂ ಸಹ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.</p>.<p>ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್, ಬಿ.ಆರ್.ಗವಾಯಿ ಮತ್ತು ಕೃಷ್ಣ ಮುರಾರಿ ಅವರನ್ನೊಳಗೊಂಡ ಪೀಠವು, ಕೋವಿಡ್ಗೆ ಸಂಬಂಧಿಸಿದಂತೆ ಕೇಂದ್ರ ನಾಗರಿಕ ಸೇವಾ ಆಯೋಗವು (ಯುಪಿಎಸ್ಸಿ) ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಹಾಗಾಗಿ, ಅ. 4ರಂದು ಪರೀಕ್ಷೆ ನಡೆಸಬಹುದು ಎಂದು ಹೇಳಿದೆ.</p>.<p class="bodytext">ಶೀತ ಮತ್ತು ಕೆಮ್ಮಿನಿಂದ ಬಳಲುತ್ತಿರುವವರಿಗೆ ಯುಪಿಎಸ್ಸಿ ಪ್ರತ್ಯೇಕ ವ್ಯವಸ್ಥೆ ಮಾಡಿರುವ ಬಗ್ಗೆಯೂ ಕೋರ್ಟ್ ಗಮನ ಸೆಳೆಯಿತು. ಕೊರೊನಾ ಸೋಂಕಿನ ಕಾರಣಕ್ಕಾಗಿ ಪರೀಕ್ಷೆಯಿಂದ ವಂಚಿತರಾಗುವ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡುವ ಬಗ್ಗೆ ಪರಿಶೀಲನೆ ನಡೆಸಬೇಕೆಂದು ಕೋರ್ಟ್, ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.</p>.<p class="bodytext">ಕೋವಿಡ್–19 ಹಾಗೂ ಪ್ರವಾಹದ ಕಾರಣಕ್ಕಾಗಿ ಎರಡು–ಮೂರು ತಿಂಗಳ ಕಾಲ ನಾಗರಿಕ ಸೇವಾ ಪರೀಕ್ಷೆಯನ್ನು ಮುಂದೂಡಬೇಕೆಂದು ಕೋರಿ ಕೆಲ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು.</p>.<p class="bodytext">ಕೋವಿಡ್ ಕಾರಣಕ್ಕಾಗಿ ಅಭ್ಯರ್ಥಿಗಳು ಸರಿಯಾದ ಕೋಚಿಂಗ್ ಹಾಗೂ ಇತರ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗಿಲ್ಲ ಎನ್ನುವ ಅರ್ಜಿದಾರರ ವಾದಕ್ಕೆ, ನ್ಯಾಯಪೀಠವು ಅಧ್ಯಯನಕ್ಕೆ ಸಂಬಂಧಿಸಿದಂತೆ ಸಾಮಗ್ರಿಗಳು ಆನ್ಲೈನ್ನಲ್ಲಿ ಲಭ್ಯವಿರುವ ಬಗ್ಗೆ ಉಲ್ಲೇಖಿಸಿತು.</p>.<p class="bodytext">ಈ ಬಾರಿ ಒಟ್ಟು 72 ಪರೀಕ್ಷಾ ಕೇಂದ್ರಗಳಲ್ಲಿ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ ನಡೆಯಲಿದ್ದು, 6 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ: </strong>ಅಕ್ಟೋಬರ್ 4ರಂದು ನಿಗದಿಯಾಗಿರುವ ಕೇಂದ್ರ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಲು ಬುಧವಾರ ಸುಪ್ರೀಂ ಕೋರ್ಟ್ ನಿರಾಕರಿಸಿದೆ.</p>.<p class="title">2020 ಮತ್ತು 2021ರ ಯುಪಿಎಸ್ಸಿ ಪರೀಕ್ಷೆಗಳನ್ನು ಒಟ್ಟಿಗೆ ನಡೆಸಲು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನೂ ಸಹ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.</p>.<p>ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್, ಬಿ.ಆರ್.ಗವಾಯಿ ಮತ್ತು ಕೃಷ್ಣ ಮುರಾರಿ ಅವರನ್ನೊಳಗೊಂಡ ಪೀಠವು, ಕೋವಿಡ್ಗೆ ಸಂಬಂಧಿಸಿದಂತೆ ಕೇಂದ್ರ ನಾಗರಿಕ ಸೇವಾ ಆಯೋಗವು (ಯುಪಿಎಸ್ಸಿ) ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಹಾಗಾಗಿ, ಅ. 4ರಂದು ಪರೀಕ್ಷೆ ನಡೆಸಬಹುದು ಎಂದು ಹೇಳಿದೆ.</p>.<p class="bodytext">ಶೀತ ಮತ್ತು ಕೆಮ್ಮಿನಿಂದ ಬಳಲುತ್ತಿರುವವರಿಗೆ ಯುಪಿಎಸ್ಸಿ ಪ್ರತ್ಯೇಕ ವ್ಯವಸ್ಥೆ ಮಾಡಿರುವ ಬಗ್ಗೆಯೂ ಕೋರ್ಟ್ ಗಮನ ಸೆಳೆಯಿತು. ಕೊರೊನಾ ಸೋಂಕಿನ ಕಾರಣಕ್ಕಾಗಿ ಪರೀಕ್ಷೆಯಿಂದ ವಂಚಿತರಾಗುವ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡುವ ಬಗ್ಗೆ ಪರಿಶೀಲನೆ ನಡೆಸಬೇಕೆಂದು ಕೋರ್ಟ್, ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.</p>.<p class="bodytext">ಕೋವಿಡ್–19 ಹಾಗೂ ಪ್ರವಾಹದ ಕಾರಣಕ್ಕಾಗಿ ಎರಡು–ಮೂರು ತಿಂಗಳ ಕಾಲ ನಾಗರಿಕ ಸೇವಾ ಪರೀಕ್ಷೆಯನ್ನು ಮುಂದೂಡಬೇಕೆಂದು ಕೋರಿ ಕೆಲ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು.</p>.<p class="bodytext">ಕೋವಿಡ್ ಕಾರಣಕ್ಕಾಗಿ ಅಭ್ಯರ್ಥಿಗಳು ಸರಿಯಾದ ಕೋಚಿಂಗ್ ಹಾಗೂ ಇತರ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗಿಲ್ಲ ಎನ್ನುವ ಅರ್ಜಿದಾರರ ವಾದಕ್ಕೆ, ನ್ಯಾಯಪೀಠವು ಅಧ್ಯಯನಕ್ಕೆ ಸಂಬಂಧಿಸಿದಂತೆ ಸಾಮಗ್ರಿಗಳು ಆನ್ಲೈನ್ನಲ್ಲಿ ಲಭ್ಯವಿರುವ ಬಗ್ಗೆ ಉಲ್ಲೇಖಿಸಿತು.</p>.<p class="bodytext">ಈ ಬಾರಿ ಒಟ್ಟು 72 ಪರೀಕ್ಷಾ ಕೇಂದ್ರಗಳಲ್ಲಿ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ ನಡೆಯಲಿದ್ದು, 6 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>