ನವದೆಹಲಿ: ಹರಿಯಾಣದ ಖೋರಿ ಗ್ರಾಮದ ಅರಾವಳಿ ಅರಣ್ಯ ಪ್ರದೇಶದಲ್ಲಿ ಸುಮಾರು 10,000 ವಸತಿ ನಿರ್ಮಾಣಗಳು ಸೇರಿದಂತೆ ಎಲ್ಲಾ ಅತಿಕ್ರಮಣಗಳನ್ನು ತೆರವುಗೊಳಿಸುವಂತೆ ಹರಿಯಾಣ ಮತ್ತು ಫರೀದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ಗೆ ನಿರ್ದೇಶನ ನೀಡಿರುವ ಆದೇಶಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ಗುರುವಾರ ನಿರಾಕರಿಸಿದೆ.