ಈ ವಿಚಾರಣೆಯನ್ನು ತುರ್ತಾಗಿ ನಡೆಸದಿದ್ದರೆ, ಚುನಾವಣಾ ಅಧಿಸೂಚನೆ ಹೊರಬೀಳುವ ಸಾಧ್ಯತೆ ಇದೆ ಎಂದು ಹಿರಿಯ ವಕೀಲ ಪಿ.ಎಸ್.ಪಟ್ವಾಲಿಯಾ ಅವರು ಸಲ್ಲಿಸಿದ್ದ ಅರ್ಜಿಯನ್ನು ಗಮನಿಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ.ಎಸ್.ನರಸಿಂಹ ಮತ್ತು ಜೆ.ಬಿ.ಪಾರ್ದಿವಾಲ ಅವರನ್ನೊಳಗೊಂಡ ಪೀಠವು, ‘ಈ ವಿಷಯವು ದಿನದ ವಿಚಾರಣಾ ಪಟ್ಟಿಯಲ್ಲಿಲ್ಲ. ನಂತರ ಇದನ್ನು ಪಟ್ಟಿಗೆ ಸೇರಿಸಬಹುದು. ಎಲ್ಲ ವಕೀಲರಿಗೂ ಒಂದೇ ನ್ಯಾಯ. ವಿಚಾರಣಾ ಪಟ್ಟಿಯಲ್ಲಿಲ್ಲದ ವಿಷಯವನ್ನು ಈಗ ವಿಚಾರಣೆಗೆ ತೆಗೆದುಕೊಳ್ಳುವುದು ಬೇಡ’ ಎಂದು ಹೇಳಿತು.