ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ ವಿರುದ್ಧ ನಿಯಮ ಉಲ್ಲಂಘನೆ ಪ್ರಕರಣ: ಮೇಲ್ಮನವಿ ವಜಾಗೊಳಿಸಿದ ಸುಪ್ರೀಂ

Last Updated 1 ಮಾರ್ಚ್ 2021, 21:22 IST
ಅಕ್ಷರ ಗಾತ್ರ

ನವದೆಹಲಿ: ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು 23 ವರ್ಷಗಳ ಹಿಂದೆ ಮೈಸೂರಿನಲ್ಲಿ ಭೂಮಿ ಖರೀದಿಸಿದ ಸಂದರ್ಭ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ದೂರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ವಜಾಗೊಳಿಸಿದೆ.

ಸಾಮಾಜಿಕ ಕಾರ್ಯಕರ್ತ ಎನ್‌.ಗಂಗರಾಜು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್‌.ಎ. ಬೊಬಡೆ ನೇತೃತ್ವದ ಪೀಠ ಈ ಆದೇಶ ನೀಡಿದೆ.

ಅಧೀನ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯ ವಿಚಾರಣೆ ನಡೆಸಿದ್ದ ರಾಜ್ಯ ಹೈಕೋರ್ಟ್‌ ಕಳೆದ ಅಕ್ಟೋಬರ್‌ 30ರಂದು ಪ್ರಕರಣವನ್ನು ವಜಾಗೊಳಿಸಿ ಆದೇಶಿಸಿತ್ತು.

ಹೈಕೋರ್ಟ್‌ನ ಆದೇಶ ಪ್ರಶ್ನಿಸಲಾದ ಮೇಲ್ಮನವಿಯನ್ನು ವಿಚಾರಣೆಗೆ ಪರಿಗಣಿಸಲು ನ್ಯಾಯಮೂರ್ತಿಗಳಾದ ಎ.ಎಸ್‌. ಬೋಪಣ್ಣ ಹಾಗೂ ವಿ.ರಾಮಸುಬ್ರಹ್ಮಣ್ಯ ಅವರಿದ್ದ ಪೀಠ ನಿರಾಕರಿಸಿತು.

1997ರಲ್ಲಿ ಸಿದ್ದರಾಮಯ್ಯ ಅವರು ಉಪ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಮೈಸೂರಿನಲ್ಲಿ 10 ಗುಂಟೆ ಜಮೀನು ಖರೀದಿಸಿದ್ದು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿಯಮ ಉಲ್ಲಂಘಿಸಿದ್ದಾರೆ ಎಂದು ದೂರಿ ಗಂಗರಾಜು ಅವರು 2018ರಲ್ಲಿ ದೂರು ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ್ದ ಪೊಲೀಸರು ಸಾಕ್ಷ್ಯಾಧಾರಗಳಿಲ್ಲ ಎಂದು ತಿಳಿಸಿ ಪ್ರಕರಣವನ್ನು ಇತ್ಯರ್ಥಪಡಿಸಿದ್ದರು.

ಆದರೆ, ಪೊಲೀಸರು ಪ್ರಕರಣ ಇತ್ಯರ್ಥಪಡಿಸಿದ್ದರೂ, ಚುನಾಯಿತ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಮನ್ಸ್‌ ಜಾರಿಗೊಳಿಸಿತ್ತು. ಸಮನ್ಸ್‌ ಪ್ರಶ್ನಿಸಿ ಸಿದ್ದರಾಮಯ್ಯ ಅವರು ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT