ಮರಾಠಾ ಕೋಟಾವನ್ನು ರದ್ದುಪಡಿಸುವಾಗ, ನ್ಯಾಯಮೂರ್ತಿ ಅಶೋಕ್ ಭೂಷಣ್ ಅವರ ಅಧ್ಯಕ್ಷತೆಯ ಐವರು ನ್ಯಾಯಮೂರ್ತಿಗಳ ಪೀಠವು ಮೇ 5 ರಂದು ನೀಡಿದ್ದ ತೀರ್ಪಿನಲ್ಲಿ ಸಂವಿಧಾನದ 102ನೇ ತಿದ್ದುಪಡಿಯ ಮಾನ್ಯತೆಯನ್ನು ಎತ್ತಿಹಿಡಿದು, ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗಕ್ಕೆ ಸಾಂವಿಧಾನಿಕ ಹಕ್ಕು ಇದೆ ಎಂದು ಹೇಳಿತ್ತು. ಅಲ್ಲದೆ, ರಾಜ್ಯಗಳಿಗೆ ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ ಪಟ್ಟಿಗಳನ್ನು ಸಿದ್ಧಪಡಿಸುವ ಅಧಿಕಾರ ಇಲ್ಲ ಎಂದೂ ನ್ಯಾಯಾಲಯ ಘೋಷಿಸಿತ್ತು.