ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಧಾರ್‌ ತೀರ್ಪು ಪುನರ್‌ಪರಿಶೀಲನೆ ಅರ್ಜಿಗಳನ್ನು ತಿರಸ್ಕರಿಸಿದ ಸುಪ್ರೀಂ

Last Updated 20 ಜನವರಿ 2021, 16:28 IST
ಅಕ್ಷರ ಗಾತ್ರ

ನವದೆಹಲಿ: ಆಧಾರ್‌ ಯೋಜನೆಯ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿ ಹಿಡಿದು 2018ರಲ್ಲಿ ತಾನು ನೀಡಿದ್ದ ತೀರ್ಪನ್ನು ಪುನರ್‌ಪರಿಶೀಲಿಸಲು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ತಿರಸ್ಕರಿಸಿದೆ.

ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್‌ ನೇತೃತ್ವದ ಐದು ಸದಸ್ಯರಿದ್ದ ಸಾಂವಿಧಾನಿಕ ಪೀಠವು, 4:1 ಬಹುಮತದೊಂದಿಗೆ ಪುನರ್‌ಪರಿಶೀಲನಾ ಅರ್ಜಿಗಳನ್ನು ತಿರಸ್ಕರಿಸಿದೆ.

ನ್ಯಾಯಮೂರ್ತಿಗಳಾದ ಅಶೋಕ್‌ಭಾನ್‌, ಎಸ್‌.ಅಬ್ದುಲ್‌ ನಜೀರ್‌, ಬಿ.ಆರ್‌.ಗವಾಯಿ ಈ ಪೀಠದಲ್ಲಿದ್ದಾರೆ.

‘ಮಸೂದೆಯೊಂದನ್ನು ಹಣಕಾಸು ಮಸೂದೆ ಎಂಬುದಾಗಿ ಪ್ರಮಾಣೀಕರಿಸಿದ್ದನ್ನು ಪ್ರಶ್ನಿಸಿದ ಅಂಶ ಕುರಿತು ವಿಸ್ತೃತ ಪೀಠವು ತನ್ನ ನಿರ್ಣಯ ಪ್ರಕಟಿಸುವವರೆಗೆ ಈ ಪುನರ್‌ಪರಿಶೀಲನಾ ಅರ್ಜಿಗಳ ವಿಚಾರಣೆಯನ್ನು ಬಾಕಿ ಉಳಿಸಬೇಕು’ ಎಂದು ಪೀಠದಲ್ಲಿದ್ದ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದರು.

‘ನ್ಯಾಯಪೀಠ ಬಹುಮತದೊಂದಿಗೆ ಪ್ರಕಟಿಸಿರುವ ತೀರ್ಪಿಗೆ ಸಹಮತ ವ್ಯಕ್ತಪಡಿಸಲಾಗದ ನನ್ನ ಅಸಾಮರ್ಥ್ಯದ ಬಗ್ಗೆ ನಾನು ವಿಷಾದಿಸುತ್ತೇನೆ’ ಎಂದು ನ್ಯಾ.ಚಂದ್ರಚೂಡ್‌ ಪ್ರತ್ಯೇಕ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

‘ಆಧಾರ್‌ ಕಾಯ್ದೆಯನ್ನು ಹಣಕಾಸು ಮಸೂದೆಯಾಗಿ ಅಂಗೀಕರಿಸಬಾರದಿತ್ತು. ಇದು ಸಂವಿಧಾನಕ್ಕೆ ಬಗೆದ ವಂಚನೆ’ ಎಂದು 2018ರಲ್ಲಿ ಸುಪ್ರೀಂಕೋರ್ಟ್‌ ತೀರ್ಪು ಪ್ರಕಟಿಸುವ ಸಂದರ್ಭದಲ್ಲಿ ನ್ಯಾಯಮೂರ್ತಿ ಚಂದ್ರಚೂಡ್ ಅವರು ತಮ್ಮ ಭಿನ್ನ ನಿಲುವನ್ನು ವ್ಯಕ್ತಪಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT