‘ಇನ್ನು ಮುಂದೆ ಮರಣ ಇಚ್ಛೆಯ ಉಯಿಲು ಬರೆಯುವ ವ್ಯಕ್ತಿಯು ಇಬ್ಬರು ಸಾಕ್ಷಿಗಳ ಸಮ್ಮುಖದಲ್ಲಿ ದಾಖಲೆಗಳಿಗೆ ಸಹಿ ಹಾಕಬೇಕು. ಅದನ್ನು ನೋಟರಿ ಅಥವಾ ಗೆಜೆಟೆಡ್ ಅಧಿಕಾರಿ ದೃಢೀಕರಿಸಬೇಕು’ ಎಂದು ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ, ಅನಿರುದ್ಧ್ ಬೋಸ್, ಹೃಷಿಕೇಶ್ ರಾಯ್ ಮತ್ತು ಸಿ.ಟಿ.ರವಿಕುಮಾರ್ ಅವರನ್ನೊಳಗೊಂಡ ನ್ಯಾಯಪೀಠ ಹೇಳಿದೆ.