<p><strong>ನವದೆಹಲಿ:</strong> ಸುದರ್ಶನ ಸುದ್ದಿವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಯುಪಿಎಸ್ಸಿ ಜಿಹಾದ್’ ಎಂಬ ಕಾರ್ಯಕ್ರಮ ಬಿತ್ತರಿಸದಂತೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ.</p>.<p>‘ಒಂದು ಸಮುದಾಯವನ್ನು ಅವಹೇಳನ ಮಾಡುವ ಇಂತಹ ಕಾರ್ಯಕ್ರಮವನ್ನು ಒಪ್ಪಲು ಸಾಧ್ಯವಿಲ್ಲ’ ಎಂದು ನ್ಯಾಯಾಲಯ ಸ್ಪಷ್ಟವಾಗಿ ಹೇಳಿದೆ. ಕಾರ್ಯಕ್ರಮದ ಉಳಿದ ಕಂತುಗಳನ್ನು ಪ್ರಸಾರ ಮಾಡದಂತೆಯೂ ಸುದ್ದಿವಾಹಿನಿಗೆ ತಾಕೀತು ಮಾಡಿದೆ.</p>.<p>‘ಪತ್ರಕರ್ತರಿಗೆ ಮುಕ್ತವಾದ ಅಭಿವ್ಯಕ್ತಿ ಸ್ವಾತಂತ್ರ್ಯವಿಲ್ಲ. ಇಂದಿನ ದಿನಗಳಲ್ಲಿ ಪತ್ರಿಕೆಗಳನ್ನು ಓದುವ ಜನರಿಗಿಂತ ಟಿ.ವಿ ವೀಕ್ಷಕರ ಸಂಖ್ಯೆ ಹೆಚ್ಚಾಗಿದೆ. ಮುದ್ರಣ ಮಾಧ್ಯಮಕ್ಕಿಂತಹೆಚ್ಚೆಚ್ಚು ಜನರನ್ನು ತಲುಪುತ್ತಿರುವ ದೃಶ್ಯ ಮಾಧ್ಯಮಗಳನ್ನು ನಿಯಂತ್ರಿಸುವ ಅಗತ್ಯವಿದೆ’ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.</p>.<p>‘ದೇಶದ ಆಡಳಿತ ಸೇವೆಗೆ ನುಸುಳಲುಮುಸಲ್ಮಾನರು ಹುನ್ನಾರ ನಡೆಸಿದ್ದಾರೆ ಎಂದು ಬಿಂಬಿಸಲು ಈ ಸುದ್ದಿ ವಾಹಿನಿ ಪ್ರಯತ್ನಿಸಿದೆ’ ಎಂದು ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠ ತರಾಟೆಗೆ ತೆಗೆದುಕೊಂಡಿದೆ.ನ್ಯಾಯಮೂರ್ತಿಗಳಾದ ಇಂದು ಮಲ್ಹೋತ್ರಾ ಮತ್ತು ಕೆ.ಎಂ. ಜೋಸೆಫ್ ಕೂಡ ಈ ಪೀಠದಲ್ಲಿದ್ದರು.</p>.<p class="Subhead">ಅವಹೇಳನ ಸಲ್ಲದು:‘ದೇಶದ ಎಲ್ಲ ಸಮುದಾಯದವರು ಸಾಮರಸ್ಯದಿಂದ ಕೂಡಿ ಬಾಳಬೇಕು ಎನ್ನುವುದು ಸಂವಿಧಾನದ ಮೂಲ ತತ್ವ ಮತ್ತು ಆಶಯ. ಭಾರತ ಹಲವು ನಾಗರಿಕತೆ, ಸಂಸ್ಕೃತಿ ಮತ್ತು ಮೌಲ್ಯಗಳ ತವರು’ ಎಂದು ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ.</p>.<p>ಸುದರ್ಶನ ಸುದ್ದಿವಾಹಿನಿಯ ‘ಯುಪಿಎಸ್ಸಿ ಜಿಹಾದ್’ ಕಾರ್ಯಕ್ರಮ ಪ್ರಸಾರಕ್ಕೂ ಮುನ್ನವೇ ತಡೆ ನೀಡುವಂತೆ ಕೋರಿ ವಕೀಲ ಫಿರೋಜ್ ಇಕ್ಬಾಲ್ ಖಾನ್ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ತಡೆ ನೀಡಲು ಕೋರ್ಟ್ ಆಗಸ್ಟ್ 28ರಂದು ನಿರಾಕರಿಸಿತ್ತು.</p>.<p>‘ಈ ಕಾರ್ಯಕ್ರಮದ ಕೆಲವು ಕಂತುಗಳು ಈಗಾಗಲೇ ಪ್ರಸಾರವಾಗಿದ್ದು,ತಕ್ಷಣ ಕಾರ್ಯಕ್ರಮ ಪ್ರಸಾರಕ್ಕೆ ತಡೆ ನೀಡಬೇಕು’ ಎಂದು ಫಿರೋಜ್ ನ್ಯಾಯಾಲಯದ ಮೊರೆ ಹೋಗಿದ್ದರು.</p>.<p class="Subhead"><strong>ತನಿಖಾ ಪತ್ರಿಕೋದ್ಯಮ ಆಧರಿತ ಕಾರ್ಯಕ್ರಮ</strong>:‘ಯುಪಿಎಸ್ಸಿ ಜಿಹಾದ್’ ತನಿಖಾ ಪತ್ರಿಕೋದ್ಯಮ ಆಧರಿತ ಕಾರ್ಯಕ್ರಮವಾಗಿದ್ದು, ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುತ್ತದೆ’ ಎಂದು ಸುದ್ದಿವಾಹಿನಿ ಪರ ವಾದ ಮಂಡಿಸಿದ ಹಿರಿಯ ವಕೀಲ ಶ್ಯಾಮ್ ದಿವಾನ್ ಹೇಳಿದರು.</p>.<p>ಕೆಲವು ಸುದ್ದಿವಾಹಿನಿಗಳಲ್ಲಿ ಪ್ರಸಾರವಾಗುತ್ತಿರುವ ಗುಂಪು ಚರ್ಚೆ ಗುಣಮಟ್ಟದ ಬಗ್ಗೆ ನ್ಯಾಯಮೂರ್ತಿಗಳು ಅಸಮಾಧಾನ ಹೊರಹಾಕಿದರು.</p>.<p class="Subhead"><strong>ಅಂಕುಶಕ್ಕೆ ಕೇಂದ್ರ ವಿರೋಧ:</strong> ಸುದ್ದಿವಾಹಿನಿಗಳನ್ನು ನಿಯಂತ್ರಿಸುವ ಪ್ರಸ್ತಾವವನ್ನು ಕೇಂದ್ರ ಸರ್ಕಾರದ ಪ್ರತಿನಿಧಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಬಲವಾಗಿ ವಿರೋಧಿಸಿದರು. ಮುದ್ರಣ ಮತ್ತು ದೃಶ್ಯ ಮಾಧ್ಯಮಗಳನ್ನು ಪ್ರತ್ಯೇಕಿಸಿ ನೋಡುವುದು ಸಾಧುವಲ್ಲ ಎಂದರು. ‘ಕೆಲವೊಂದನ್ನು ನಿಯಂತ್ರಿಸುವ ಭರದಲ್ಲಿ ಕಾನೂನು ಎಲ್ಲವನ್ನೂ ನಿಯಂತ್ರಿಸುವಂತಾಗಬಾರದು’ ಎಂದು ಹೇಳಿದ ನ್ಯಾಯ<br />ಮೂರ್ತಿಗಳು, ವಿಚಾರಣೆಯನ್ನು ಸೆ.17ಕ್ಕೆ ಮುಂದೂಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸುದರ್ಶನ ಸುದ್ದಿವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಯುಪಿಎಸ್ಸಿ ಜಿಹಾದ್’ ಎಂಬ ಕಾರ್ಯಕ್ರಮ ಬಿತ್ತರಿಸದಂತೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ.</p>.<p>‘ಒಂದು ಸಮುದಾಯವನ್ನು ಅವಹೇಳನ ಮಾಡುವ ಇಂತಹ ಕಾರ್ಯಕ್ರಮವನ್ನು ಒಪ್ಪಲು ಸಾಧ್ಯವಿಲ್ಲ’ ಎಂದು ನ್ಯಾಯಾಲಯ ಸ್ಪಷ್ಟವಾಗಿ ಹೇಳಿದೆ. ಕಾರ್ಯಕ್ರಮದ ಉಳಿದ ಕಂತುಗಳನ್ನು ಪ್ರಸಾರ ಮಾಡದಂತೆಯೂ ಸುದ್ದಿವಾಹಿನಿಗೆ ತಾಕೀತು ಮಾಡಿದೆ.</p>.<p>‘ಪತ್ರಕರ್ತರಿಗೆ ಮುಕ್ತವಾದ ಅಭಿವ್ಯಕ್ತಿ ಸ್ವಾತಂತ್ರ್ಯವಿಲ್ಲ. ಇಂದಿನ ದಿನಗಳಲ್ಲಿ ಪತ್ರಿಕೆಗಳನ್ನು ಓದುವ ಜನರಿಗಿಂತ ಟಿ.ವಿ ವೀಕ್ಷಕರ ಸಂಖ್ಯೆ ಹೆಚ್ಚಾಗಿದೆ. ಮುದ್ರಣ ಮಾಧ್ಯಮಕ್ಕಿಂತಹೆಚ್ಚೆಚ್ಚು ಜನರನ್ನು ತಲುಪುತ್ತಿರುವ ದೃಶ್ಯ ಮಾಧ್ಯಮಗಳನ್ನು ನಿಯಂತ್ರಿಸುವ ಅಗತ್ಯವಿದೆ’ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.</p>.<p>‘ದೇಶದ ಆಡಳಿತ ಸೇವೆಗೆ ನುಸುಳಲುಮುಸಲ್ಮಾನರು ಹುನ್ನಾರ ನಡೆಸಿದ್ದಾರೆ ಎಂದು ಬಿಂಬಿಸಲು ಈ ಸುದ್ದಿ ವಾಹಿನಿ ಪ್ರಯತ್ನಿಸಿದೆ’ ಎಂದು ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠ ತರಾಟೆಗೆ ತೆಗೆದುಕೊಂಡಿದೆ.ನ್ಯಾಯಮೂರ್ತಿಗಳಾದ ಇಂದು ಮಲ್ಹೋತ್ರಾ ಮತ್ತು ಕೆ.ಎಂ. ಜೋಸೆಫ್ ಕೂಡ ಈ ಪೀಠದಲ್ಲಿದ್ದರು.</p>.<p class="Subhead">ಅವಹೇಳನ ಸಲ್ಲದು:‘ದೇಶದ ಎಲ್ಲ ಸಮುದಾಯದವರು ಸಾಮರಸ್ಯದಿಂದ ಕೂಡಿ ಬಾಳಬೇಕು ಎನ್ನುವುದು ಸಂವಿಧಾನದ ಮೂಲ ತತ್ವ ಮತ್ತು ಆಶಯ. ಭಾರತ ಹಲವು ನಾಗರಿಕತೆ, ಸಂಸ್ಕೃತಿ ಮತ್ತು ಮೌಲ್ಯಗಳ ತವರು’ ಎಂದು ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ.</p>.<p>ಸುದರ್ಶನ ಸುದ್ದಿವಾಹಿನಿಯ ‘ಯುಪಿಎಸ್ಸಿ ಜಿಹಾದ್’ ಕಾರ್ಯಕ್ರಮ ಪ್ರಸಾರಕ್ಕೂ ಮುನ್ನವೇ ತಡೆ ನೀಡುವಂತೆ ಕೋರಿ ವಕೀಲ ಫಿರೋಜ್ ಇಕ್ಬಾಲ್ ಖಾನ್ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ತಡೆ ನೀಡಲು ಕೋರ್ಟ್ ಆಗಸ್ಟ್ 28ರಂದು ನಿರಾಕರಿಸಿತ್ತು.</p>.<p>‘ಈ ಕಾರ್ಯಕ್ರಮದ ಕೆಲವು ಕಂತುಗಳು ಈಗಾಗಲೇ ಪ್ರಸಾರವಾಗಿದ್ದು,ತಕ್ಷಣ ಕಾರ್ಯಕ್ರಮ ಪ್ರಸಾರಕ್ಕೆ ತಡೆ ನೀಡಬೇಕು’ ಎಂದು ಫಿರೋಜ್ ನ್ಯಾಯಾಲಯದ ಮೊರೆ ಹೋಗಿದ್ದರು.</p>.<p class="Subhead"><strong>ತನಿಖಾ ಪತ್ರಿಕೋದ್ಯಮ ಆಧರಿತ ಕಾರ್ಯಕ್ರಮ</strong>:‘ಯುಪಿಎಸ್ಸಿ ಜಿಹಾದ್’ ತನಿಖಾ ಪತ್ರಿಕೋದ್ಯಮ ಆಧರಿತ ಕಾರ್ಯಕ್ರಮವಾಗಿದ್ದು, ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುತ್ತದೆ’ ಎಂದು ಸುದ್ದಿವಾಹಿನಿ ಪರ ವಾದ ಮಂಡಿಸಿದ ಹಿರಿಯ ವಕೀಲ ಶ್ಯಾಮ್ ದಿವಾನ್ ಹೇಳಿದರು.</p>.<p>ಕೆಲವು ಸುದ್ದಿವಾಹಿನಿಗಳಲ್ಲಿ ಪ್ರಸಾರವಾಗುತ್ತಿರುವ ಗುಂಪು ಚರ್ಚೆ ಗುಣಮಟ್ಟದ ಬಗ್ಗೆ ನ್ಯಾಯಮೂರ್ತಿಗಳು ಅಸಮಾಧಾನ ಹೊರಹಾಕಿದರು.</p>.<p class="Subhead"><strong>ಅಂಕುಶಕ್ಕೆ ಕೇಂದ್ರ ವಿರೋಧ:</strong> ಸುದ್ದಿವಾಹಿನಿಗಳನ್ನು ನಿಯಂತ್ರಿಸುವ ಪ್ರಸ್ತಾವವನ್ನು ಕೇಂದ್ರ ಸರ್ಕಾರದ ಪ್ರತಿನಿಧಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಬಲವಾಗಿ ವಿರೋಧಿಸಿದರು. ಮುದ್ರಣ ಮತ್ತು ದೃಶ್ಯ ಮಾಧ್ಯಮಗಳನ್ನು ಪ್ರತ್ಯೇಕಿಸಿ ನೋಡುವುದು ಸಾಧುವಲ್ಲ ಎಂದರು. ‘ಕೆಲವೊಂದನ್ನು ನಿಯಂತ್ರಿಸುವ ಭರದಲ್ಲಿ ಕಾನೂನು ಎಲ್ಲವನ್ನೂ ನಿಯಂತ್ರಿಸುವಂತಾಗಬಾರದು’ ಎಂದು ಹೇಳಿದ ನ್ಯಾಯ<br />ಮೂರ್ತಿಗಳು, ವಿಚಾರಣೆಯನ್ನು ಸೆ.17ಕ್ಕೆ ಮುಂದೂಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>