‘2006ರಲ್ಲಿ ಪ್ರಕಾಶ್ ಸಿಂಗ್ ಅವರ ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಡಿಜಿಪಿಗಳನ್ನು ನೇಮಿಸುವ ಅಧಿಕಾರ ಆಯಾ ರಾಜ್ಯ ಸರ್ಕಾರಗಳಿಗೆ ಇದೆ ಎಂದು ಹೇಳಿತ್ತು. ಜೊತೆಗೆ ನೇಮಕಾತಿ ವಿಚಾರವಾಗಿ ಕೆಲ ಕಾರ್ಯವಿಧಾನಗಳನ್ನೂ ಸೂಚಿಸಿತ್ತು. ಅಸ್ಥಾನ ನೇಮಕ ಪ್ರಶ್ನಿಸಿದ್ದ ಅರ್ಜಿಯ ವಿಚಾರಣೆ ವೇಳೆ ದೆಹಲಿ ಹೈಕೋರ್ಟ್, ಸುಪ್ರೀಂ ಕೋರ್ಟ್ನ ಈ ತೀರ್ಪು ಡಿಜಿಪಿಗಳ ನೇಮಕಕ್ಕೆ ಮಾತ್ರ ಅನ್ವಯಿಸುತ್ತದೆ. ದೆಹಲಿ ಸೇರಿದಂತೆ ಇತರೆ ನಗರಗಳ ಪೊಲೀಸ್ ಕಮಿಷನರ್ಗಳ ಆಯ್ಕೆಗೆ ಇದನ್ನು ಪರಿಗಣಿಸಲಾಗುವುದಿಲ್ಲ ಎಂದು ಹೇಳಿದೆ. ಹೈಕೋರ್ಟ್ನ ಈ ತೀರ್ಪು ಪುನರಾವರ್ತಿತ ಪರಿಣಾಮ ಉಂಟು ಮಾಡುವ ಸಾಧ್ಯತೆ ಇದೆ. ಈ ಸಂಬಂಧ ನಾವು ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ’ ಎಂದು ನ್ಯಾಯಮೂರ್ತಿಗಳಾದ ಪಿ.ಎಸ್.ನರಸಿಂಹ ಹಾಗೂ ಜೆ.ಬಿ.ಪಾರ್ದಿವಾಲಾ ಅವರನ್ನೊಳಗೊಂಡ ಪೀಠವು ಹೇಳಿದೆ.