<p>ನವದೆಹಲಿ: ಕೋವಿಡ್–19 ಲಸಿಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಿದ ಪೋಸ್ಟರ್ಗಳನ್ನು ಅಂಟಿಸಿದವರ ವಿರುದ್ಧ ಮೊಕದ್ದಮೆ ದಾಖಲಿಸಿ, ಬಂಧಿಸಿರುವ ಪ್ರಕರಣವನ್ನು ನ್ಯಾಯಾಲಯದ ಗಮನಕ್ಕೆ ತರುವಂತೆ ಸುಪ್ರೀಂ ಕೋರ್ಟ್ ಅರ್ಜಿದಾರರನ್ನು ಕೇಳಿದೆ.</p>.<p>ಕೇಂದ್ರದ ಲಸಿಕೆ ನೀತಿಯನ್ನು ಟೀಕಿಸಿ ಪೋಸ್ಟರ್ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಎಫ್ಐಆರ್ ದಾಖಲಿಸಬೇಡಿ ಎಂದು ಆದೇಶಿಸಲು ಸಾಧ್ಯವಿಲ್ಲ ಎಂದಿರುವ ಸುಪ್ರೀಂ ಕೋರ್ಟ್, ಪ್ರತಿಯೊಂದು ಪ್ರಕರಣದ ವಿವರವನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಅರ್ಜಿದಾರರನ್ನು ಕೇಳಿದೆ.</p>.<p>ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ಎಂ.ಆರ್. ಶಾ ಅವರನ್ನೊಳಗೊಂಡ ಪೀಠ ಅರ್ಜಿದಾರರಾದ ಪ್ರದೀಪ್ ಕುಮಾರ್ ಯಾದವ್ ಅವರಿಗೆ, ಒಂದು ವಾರದೊಳಗೆ ಪ್ರತಿ ಪ್ರಕರಣದ ವಿವರವನ್ನು ನ್ಯಾಯಾಲಯದ ಗಮನಕ್ಕೆ ತರಲು ತಿಳಿಸಿದೆ.</p>.<p>’ಅರ್ಜಿಯ ಜತೆ ಕೇವಲ ಸುದ್ದಿ ಪತ್ರಿಕೆಗಳ ವರದಿಯ ತುಣುಕುಗಳನ್ನು ಸೇರಿಸಿ ತಂದರೆ ಸಾಲದು, ಈ ಪ್ರಕರಣದ ಬಗ್ಗೆ ಒಂದಷ್ಟು ಹೋಮ್ವರ್ಕ್ ಮಾಡಿಕೊಂಡು ಬರಬೇಕು’ ಎಂದು ಪೀಠ ಅರ್ಜಿದಾರರಿಗೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ಕೋವಿಡ್–19 ಲಸಿಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಿದ ಪೋಸ್ಟರ್ಗಳನ್ನು ಅಂಟಿಸಿದವರ ವಿರುದ್ಧ ಮೊಕದ್ದಮೆ ದಾಖಲಿಸಿ, ಬಂಧಿಸಿರುವ ಪ್ರಕರಣವನ್ನು ನ್ಯಾಯಾಲಯದ ಗಮನಕ್ಕೆ ತರುವಂತೆ ಸುಪ್ರೀಂ ಕೋರ್ಟ್ ಅರ್ಜಿದಾರರನ್ನು ಕೇಳಿದೆ.</p>.<p>ಕೇಂದ್ರದ ಲಸಿಕೆ ನೀತಿಯನ್ನು ಟೀಕಿಸಿ ಪೋಸ್ಟರ್ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಎಫ್ಐಆರ್ ದಾಖಲಿಸಬೇಡಿ ಎಂದು ಆದೇಶಿಸಲು ಸಾಧ್ಯವಿಲ್ಲ ಎಂದಿರುವ ಸುಪ್ರೀಂ ಕೋರ್ಟ್, ಪ್ರತಿಯೊಂದು ಪ್ರಕರಣದ ವಿವರವನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಅರ್ಜಿದಾರರನ್ನು ಕೇಳಿದೆ.</p>.<p>ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ಎಂ.ಆರ್. ಶಾ ಅವರನ್ನೊಳಗೊಂಡ ಪೀಠ ಅರ್ಜಿದಾರರಾದ ಪ್ರದೀಪ್ ಕುಮಾರ್ ಯಾದವ್ ಅವರಿಗೆ, ಒಂದು ವಾರದೊಳಗೆ ಪ್ರತಿ ಪ್ರಕರಣದ ವಿವರವನ್ನು ನ್ಯಾಯಾಲಯದ ಗಮನಕ್ಕೆ ತರಲು ತಿಳಿಸಿದೆ.</p>.<p>’ಅರ್ಜಿಯ ಜತೆ ಕೇವಲ ಸುದ್ದಿ ಪತ್ರಿಕೆಗಳ ವರದಿಯ ತುಣುಕುಗಳನ್ನು ಸೇರಿಸಿ ತಂದರೆ ಸಾಲದು, ಈ ಪ್ರಕರಣದ ಬಗ್ಗೆ ಒಂದಷ್ಟು ಹೋಮ್ವರ್ಕ್ ಮಾಡಿಕೊಂಡು ಬರಬೇಕು’ ಎಂದು ಪೀಠ ಅರ್ಜಿದಾರರಿಗೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>