ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ ಮತ್ತು ನ್ಯಾಯಮೂರ್ತಿಗಳಾದ ಎ.ಎಸ್.ಬೊಪಣ್ಣ ಮತ್ತು ವಿ.ರಾಮ ಸುಬ್ರಮಣಿಯನ್ ಅವರನ್ನೊಳಗೊಂಡ ಪೀಠ ಈ ಕುರಿತು ಕೇಂದ್ರ ಸರ್ಕಾರದ ಆರೋಗ್ಯ ಸಚಿವಾಲಯಕ್ಕೆ ನೋಟಿಸ್ ನೀಡಿ, ವಿಚಾರಣೆಯನ್ನು ಎರಡು ವಾರಗಳ ಕಾಲ ಮಂದೂಡಿದೆ. ಏಕ ರೂಪ ದರ ನಿಗದಿಪಡಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ವಕೀಲ ಅಜಯ್ ಅಗರ್ವಾಲ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.