‘ವಾಟ್ಸ್ಆ್ಯಪ್ ಪ್ರತಿಕ್ರಿಯೆಯನ್ನು ಸಲ್ಲಿಸದೇ ಹೋದರೆ, ರಾಜ್ಯಸಭೆ ಸದಸ್ಯ ಬಿನಾಯ್ ವಿಸ್ವಂ ಅವರು ಸಲ್ಲಿಸಿರುವ ಅರ್ಜಿಯಲ್ಲಿರುವ ಸಮರ್ಥನೆಯನ್ನು ಸುಪ್ರೀಂ ಕೋರ್ಟ್ ಒಪ್ಪಿಕೊಳ್ಳಲಿದೆ’ ಎಂದು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ, ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ, ವಿ.ರಾಮಸುಬ್ರಮಣಿಯನ್ ಅವರಿದ್ದ ಪೀಠವು ಹೇಳಿತು.