ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ನ್ಯಾಯಪೀಠವು, ಗುಜರಾತ್ ಸರ್ಕಾರದಿಂದ ಸಮಗ್ರ ಅಫಿಡವಿಟ್ನ ವಿವರ ಕೇಳದೆಯೇ ಅಲ್ಲಿನ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿದೆ. ಆದರೆ, ಅರ್ಹತೆಯ ಆಧಾರದಲ್ಲಿ ಅರ್ಜಿಯನ್ನು ಮರುಪರಿಶೀಲಿಸಬೇಕು ಹಾಗೂ ಅರ್ಜಿದಾರರಿಗೆ ಯೋಜನೆಯ ಸಮಗ್ರ ಮಾಹಿತಿ ನೀಡಬೇಕು ಎಂದು ಸೂಚಿಸಿತು.