ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸಾರಾಂ ಬಾಪು ಪುತ್ರನಿಗೆ ಪೆರೊಲ್ ನೀಡಿದ್ದ ಹೈಕೋರ್ಟ್ ಆದೇಶ ತಿರಸ್ಕರಿಸಿದ ಸುಪ್ರೀಂ

Last Updated 20 ಅಕ್ಟೋಬರ್ 2021, 8:10 IST
ಅಕ್ಷರ ಗಾತ್ರ

ನವದೆಹಲಿ: ಅತ್ಯಾಚಾರ ಆರೋಪದ ಮೇಲೆ ಜೈಲು ಸೇರಿರುವ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪು ಪುತ್ರ ನಾರಾಯಣ ಸಾಯಿಗೆ 14 ದಿನಗಳ ‘ಪೆರೋಲ್‘ ನೀಡಿದ್ದ ಗುಜರಾತ್ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್‌ ಬುಧವಾರ ತಳ್ಳಿ ಹಾಕಿದೆ.

ಗುಜರಾತ್ ಹೈಕೋರ್ಟ್‌ ನಾರಾಯಣ ಸಾಯಿಗೆ ಜೂನ್ 24ರಂದು ಪೆರೋಲ್ ಮಂಜೂರು ಮಾಡಿದ್ದ ಆದೇಶವನ್ನು ಪ್ರಶ್ನಿಸಿ ಗುಜರಾತ್ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಬಿ.ವಿ.ನಾಗರತ್ನ ಅವನ್ನೊಳಗೊಂಡ ಪೀಠ ಮಾನ್ಯ ಮಾಡಿತು.

‘ಜೈಲಿನಲ್ಲಿದ್ದಾಗ ಸಾಯಿ ಅವರ ಬಳಿ ಮೊಬೈಲ್ ಫೋನ್ ಪತ್ತೆಯಾಗಿರುವುದರಿಂದ, ಅವರಿಗೆ ಪೆರೊಲ್ ನೀಡುವ ವಿಷಯದಲ್ಲಿ ಜೈಲಿನ ಮೇಲ್ವಿಚಾರಕರು ನಕಾರಾತ್ಮಕ ಅಭಿಪ್ರಾಯವನ್ನು ನೀಡಿದ್ದಾರೆ. ಹೀಗಾಗಿ ಪೆರೊಲ್‌ ನೀಡುವುದು ಸೂಕ್ತವಾದ ಕ್ರಮವಲ್ಲ ಹಾಗೂ ಅದು ವಿವಿಧ ಅಂಶಗಳ ಮೇಲೆ ಅವಲಂಬಿತವಾಗಿದೆ‘ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಹೈಕೋರ್ಟ್‌ನ ಏಕಸದಸ್ಯಪೀಠ ಸಾಯಿ ಅವರಿಗೆ ನೀಡಿದ್ದ ಪೆರೋಲ್‌ಗೆ ವಿಭಾಗೀಯ ಪೀಠ ಆಗಸ್ಟ್‌ 12ರಂದು ತಡೆಯಾಜ್ಞೆ ನೀಡಿತ್ತು. ಇದಾದ ಬಳಿಕ ಗುಜರಾತ್‌ ಸರ್ಕಾರ ಸುಪ್ರೀಂಕೋರ್ಟ್‌ ಮೊರೆ ಹೋಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT