ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿಶಹಜಹಾನ್ಪುರ ಮೂಲದ ವಿದ್ಯಾರ್ಥಿನಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯಮೂರ್ತಿಗಳಾದ ಯು.ಯು.ಲಲಿತ್, ವಿನೀತ್ ಶರಣ್ ಹಾಗೂ ಎಸ್.ರವೀಂದ್ರ ಭಟ್ ಅವರಿದ್ದ ಪೀಠವು ಈ ಅರ್ಜಿಯನ್ನು ಪುರಸ್ಕರಿಸಿದೆ. ಹೈಕೋರ್ಟ್, 2019ರ ನ.7ರಂದು ಸಂತ್ರಸ್ತೆಯ ಹೇಳಿಕೆಯ ಪ್ರತಿಯನ್ನು ಆರೋಪಿಗೆ ನೀಡುವಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿತ್ತು. ಈ ಆದೇಶಕ್ಕೆ ಕಳೆದ ವರ್ಷ ನವೆಂಬರ್ 15ರಂದು ಸುಪ್ರೀಂ ಕೋರ್ಟ್ ತಡೆ ನೀಡಿ, ರಾಜ್ಯ ಸರ್ಕಾರ ಹಾಗೂ ಚಿನ್ಮಯಾನಂದ ಅವರಿಂದ ಪ್ರತಿಕ್ರಿಯೆ ಕೇಳಿತ್ತು.