‘ನಮ್ಮ ಅರ್ಜಿದಾರರು ಆಗ ಮುಖ್ಯಮಂತ್ರಿಯಾಗಿದ್ದರು. ಈಗಲೂ ಅದೇ ಹುದ್ದೆಯಲ್ಲಿದ್ದಾರೆ. ಈ ಹಿಂದೆ ಸಲ್ಲಿಸಿದ್ದ ದೂರನ್ನು ಹೈಕೋರ್ಟ್ ತಿರಸ್ಕರಿಸಿದೆ. ಇದೇ ದೂರಿನ ಮೇಲೆಯೇ ನ್ಯಾಯಾಲಯದಲ್ಲಿಮತ್ತೆ ವಿಚಾರಣೆ ಮುಂದುವರಿಸಲು ಅವಕಾಶ ಇಲ್ಲ. ಹೀಗಾಗಿ, ನ್ಯಾಯಾಲಯದಲ್ಲಿ ವಿಚಾರಣೆ ನಡೆಸುವ ಪ್ರಕ್ರಿಯೆಗೆ ತಡೆ ನೀಡಬೇಕು’ ಎಂದು ವಕೀಲರಾದ ರೋಹಟಗಿ ಕೋರಿದರು.