ನವದೆಹಲಿ: ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಕೇಂದ್ರ ಸಚಿವರ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಆರ್.ಎಫ್. ನಾರಿಮನ್ ಅವರಿದ್ದ ಪೀಠವುಸೋಮವಾರ ಈ ಸಂಬಂಧ ಆದೇಶ ನೀಡಿತು.
ಸರ್ಕಾರದ ವಸತಿ ಬಳಕೆಗಾಗಿ ಮಾಜಿ ಮುಖ್ಯಮಂತ್ರಿಗಳು ಬಾಡಿಗೆ ಪಾವತಿಗೆ ಸಂಬಂಧಿಸಿದಂತೆ ಉತ್ತರಾಖಂಡ ಹೈಕೋರ್ಟ್ ಕಳೆದ ವರ್ಷ ನೀಡಿದ್ದ ಆದೇಶವನ್ನು ಪಾಲಿಸಿಲ್ಲ ಎಂದು ನ್ಯಾಯಾಂಗ ನಿಂದನೆ ಮೊಕದ್ದಮೆ ವಿಚಾರಣೆಗೆ ಚಾಲನೆ ನೀಡಲಾಗಿತ್ತು.
ಅಧಿಕಾರದಿಂದ ಕೆಳಗಿಳಿಂದ ನಂತರ ಸರ್ಕಾರಿ ವಸತಿ ಬಳಸಿದ ಪೂರ್ಣ ಅವಧಿಗೆ ಅನ್ವಯಿಸಿ ಮಾರುಕಟ್ಟೆ ದರದಲ್ಲಿ ಬಾಡಿಗೆ ಪಾವತಿಸಬೇಕು ಎಂದು ಉತ್ತರಾಖಂಡ ಹೈಕೋರ್ಟ್ ಕಳೆದ ವರ್ಷ ಮಾಜಿ ಮುಖ್ಯಮಂತ್ರಿಗಳಿಗೆ ಆದೇಶಿಸಿತ್ತು. ಡೆಹ್ರಾಡೂನ್ ಮೂಲದ ಸೇವಾ ಸಂಸ್ಥೆಯೊಂದು ಈ ಕುರಿತು ಅರ್ಜಿಯನ್ನು ದಾಖಲಿಸಿತ್ತು.