<p class="title"><strong>ನವದೆಹಲಿ (ಪಿಟಿಐ):</strong> ಕೇಬಲ್ ಟೆಲಿವಿಷನ್ ನೆಟ್ವರ್ಕ್ (ತಿದ್ದುಪಡಿ) ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನ (ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ) ನಿಯಮಗಳನ್ನು ಪ್ರಶ್ನಿಸಿದ್ದ ಅರ್ಜಿಗಳ ಕುರಿತು ವಿವಿಧ ಹೈಕೋರ್ಟ್ಗಳಲ್ಲಿನ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.</p>.<p class="title">ದ್ವೇಷ ಭಾಷಣ ವಿಷಯ ಪ್ರಸ್ತಾಪಿಸಿದ್ದ ಹಾಗೂ ಒಟಿಟಿ ವೇದಿಕೆಯ ನಿಯಂತ್ರಣ ಕುರಿತಂತೆ ಸಲ್ಲಿಸಲಾಗಿದ್ದ ವಿವಿಧ ಅರ್ಜಿಗಳ ವಿಚಾರಣೆಯ ವೇಳೆ ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್ ಮತ್ತು ಎ.ಎಸ್.ಓಕಾ ಅವರಿದ್ದ ಪೀಠವು ಈ ಕುರಿತು ಆದೇಶವನ್ನು ನೀಡಿತು.</p>.<p>ಉಲ್ಲೇಖಿತ ವಿಷಯಕ್ಕೆ ಸಂಬಂಧಿಸಿ ವಿವಿಧ ಹೈಕೋರ್ಟ್ಗಳಲ್ಲಿರುವ ಅರ್ಜಿಗಳ ವಿಚಾರಣೆಗೆ ತಡೆಯಾಜ್ಞೆ ನೀಡಲಾಗುತ್ತಿದೆ. ಅಲ್ಲದೆ, ಈ ಪ್ರಕರಣದ ವಿಚಾರಣೆಯನ್ನು ಮೇ 19ಕ್ಕೆ ಮುಂದೂಡಲಾಗಿದೆ ಎಂದು ಪೀಠವು ತಿಳಿಸಿತು.</p>.<p>ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ‘ಸುಪ್ರೀಂ ಕೋರ್ಟ್ ಎದುರು ವಿವಿಧ ಅರ್ಜಿಗಳ ವಿಚಾರಣೆ ಬಾಕಿ ಇವೆ. ಶಾಸನಬದ್ಧ ನಿಯಮಗಳಿಗೆ ಕೆಲ ಹೈಕೋರ್ಟ್ಗಳು ತಡೆಯಾಜ್ಞೆ ನೀಡಿದ್ದು, ಕೇಂದ್ರ ಮೇಲ್ಮನವಿ ಸಲ್ಲಿಸಿದೆ ಎಂದು ತಿಳಿಸಿದರು.</p>.<p>‘ಹೈಕೋರ್ಟ್ಗಳಿಂದ ಈ ಸಂಬಂಧ ಇನ್ನಷ್ಟು ಆದೇಶಗಳು ಹೊರಬೀಳದಂತೆ ವಿಚಾರಣೆಗೆ ತಡೆಯಾಜ್ಞೆ ನೀಡಬೇಕು ಹಾಗೂ ಅರ್ಜಿಗಳನ್ನು ಸುಪ್ರೀಂ ಕೋರ್ಟ್ಗೇ ವರ್ಗಾಯಿಸಲು ಆದೇಶಿಸಬೇಕು’ ಎಂದು ಮೆಹ್ತಾ ಕೋರಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಸುಪ್ರೀಂ ಪೀಠವು, ಹೈಕೋರ್ಟ್ಗಳು ಈಗಾಗಲೇ ನೀಡಿರುವ ಮಧ್ಯಂತರ ಆದೇಶಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಿಸುವುದಿಲ್ಲ ಎಂದು ಸ್ಪಷ್ಟಪಡಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ (ಪಿಟಿಐ):</strong> ಕೇಬಲ್ ಟೆಲಿವಿಷನ್ ನೆಟ್ವರ್ಕ್ (ತಿದ್ದುಪಡಿ) ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನ (ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ) ನಿಯಮಗಳನ್ನು ಪ್ರಶ್ನಿಸಿದ್ದ ಅರ್ಜಿಗಳ ಕುರಿತು ವಿವಿಧ ಹೈಕೋರ್ಟ್ಗಳಲ್ಲಿನ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.</p>.<p class="title">ದ್ವೇಷ ಭಾಷಣ ವಿಷಯ ಪ್ರಸ್ತಾಪಿಸಿದ್ದ ಹಾಗೂ ಒಟಿಟಿ ವೇದಿಕೆಯ ನಿಯಂತ್ರಣ ಕುರಿತಂತೆ ಸಲ್ಲಿಸಲಾಗಿದ್ದ ವಿವಿಧ ಅರ್ಜಿಗಳ ವಿಚಾರಣೆಯ ವೇಳೆ ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್ ಮತ್ತು ಎ.ಎಸ್.ಓಕಾ ಅವರಿದ್ದ ಪೀಠವು ಈ ಕುರಿತು ಆದೇಶವನ್ನು ನೀಡಿತು.</p>.<p>ಉಲ್ಲೇಖಿತ ವಿಷಯಕ್ಕೆ ಸಂಬಂಧಿಸಿ ವಿವಿಧ ಹೈಕೋರ್ಟ್ಗಳಲ್ಲಿರುವ ಅರ್ಜಿಗಳ ವಿಚಾರಣೆಗೆ ತಡೆಯಾಜ್ಞೆ ನೀಡಲಾಗುತ್ತಿದೆ. ಅಲ್ಲದೆ, ಈ ಪ್ರಕರಣದ ವಿಚಾರಣೆಯನ್ನು ಮೇ 19ಕ್ಕೆ ಮುಂದೂಡಲಾಗಿದೆ ಎಂದು ಪೀಠವು ತಿಳಿಸಿತು.</p>.<p>ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ‘ಸುಪ್ರೀಂ ಕೋರ್ಟ್ ಎದುರು ವಿವಿಧ ಅರ್ಜಿಗಳ ವಿಚಾರಣೆ ಬಾಕಿ ಇವೆ. ಶಾಸನಬದ್ಧ ನಿಯಮಗಳಿಗೆ ಕೆಲ ಹೈಕೋರ್ಟ್ಗಳು ತಡೆಯಾಜ್ಞೆ ನೀಡಿದ್ದು, ಕೇಂದ್ರ ಮೇಲ್ಮನವಿ ಸಲ್ಲಿಸಿದೆ ಎಂದು ತಿಳಿಸಿದರು.</p>.<p>‘ಹೈಕೋರ್ಟ್ಗಳಿಂದ ಈ ಸಂಬಂಧ ಇನ್ನಷ್ಟು ಆದೇಶಗಳು ಹೊರಬೀಳದಂತೆ ವಿಚಾರಣೆಗೆ ತಡೆಯಾಜ್ಞೆ ನೀಡಬೇಕು ಹಾಗೂ ಅರ್ಜಿಗಳನ್ನು ಸುಪ್ರೀಂ ಕೋರ್ಟ್ಗೇ ವರ್ಗಾಯಿಸಲು ಆದೇಶಿಸಬೇಕು’ ಎಂದು ಮೆಹ್ತಾ ಕೋರಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಸುಪ್ರೀಂ ಪೀಠವು, ಹೈಕೋರ್ಟ್ಗಳು ಈಗಾಗಲೇ ನೀಡಿರುವ ಮಧ್ಯಂತರ ಆದೇಶಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಿಸುವುದಿಲ್ಲ ಎಂದು ಸ್ಪಷ್ಟಪಡಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>