ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾರಾಯಣ ಸಾಯಿಗೆ ಗುಜರಾತ್‌ ಹೈಕೋರ್ಟ್‌ ನೀಡಿದ್ದ ಫರ್ಲೊ ಆದೇಶಕ್ಕೆ ‘ಸುಪ್ರೀಂ’ ತಡೆ

Last Updated 12 ಆಗಸ್ಟ್ 2021, 7:02 IST
ಅಕ್ಷರ ಗಾತ್ರ

ನವದೆಹಲಿ: ಅತ್ಯಾಚಾರ ಪ್ರಕರಣದ ಅಪರಾಧಿ, ಅಸಾರಾಂ ಬಾಪು ಪುತ್ರ ನಾರಾಯಣ ಸಾಯಿಗೆ ಗುಜರಾತ್‌ ಹೈಕೋರ್ಟ್‌ ಮಂಜೂರು ಮಾಡಿದ್ದ ಎರಡು ವಾರಗಳ ಗೈರು ಹಾಜರಿ ರಜೆಯನ್ನು (ಫರ್ಲೊ) ಸುಪ್ರೀಂಕೋರ್ಟ್‌ ಮಂಗಳವಾರ ತಡೆಹಿಡಿದಿದೆ.

ಜೂನ್‌ 24ರಂದು ಗುಜರಾತ್‌ ಹೈಕೋರ್ಟ್‌ನ ಏಕಸದಸ್ಯ ಪೀಠವು ನಾರಾಯಣ ಸಾಯಿಗೆ ಎರಡು ವಾರಗಳ ಫರ್ಲೊ ಮಂಜೂರು ಮಾಡಿತ್ತು. ಇದನ್ನು ‍‍ಪ್ರಶ್ನಿಸಿ ಗುಜರಾತ್‌ ಹೈಕೋರ್ಟ್‌ ಸು‍ಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.

ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಡಿ.ವೈ ಚಂದ್ರಚೂಡ್‌ ಮತ್ತು ಎಂ.ಆರ್‌ ಶಾ ಅವರ ಪೀಠವು, ಗುಜರಾತ್‌ ಹೈಕೋರ್ಟ್‌ ಆದೇಶವನ್ನು ತಡೆಹಿಡಿದಿದೆ ಮತ್ತು ನಾರಾಯಣ ಸಾಯಿಗೆ ನೋಟಿಸ್‌ ಜಾರಿ ಮಾಡಿದೆ. ಜತೆಗೆ, ಈ ಅರ್ಜಿ ವಿಚಾರಣೆಯನ್ನು ಎರಡು ವಾರಗಳ ಬಳಿಕ ನಿಗದಿ ಮಾಡಿದೆ.

‌ನಾರಾಯಣ ಸಾಯಿ ಅವರ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದರು ಎಂಬ ಕಾರಣಕ್ಕೆ ಈ ಹಿಂದೆಯೂ ಗುಜರಾತ್‌ ಹೈಕೋರ್ಟ್‌ ಅವರಿಗೆ ಫರ್ಲೊ ಮಂಜೂರು ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT