ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯಾಚಾರ ಪ್ರಕರಣ: ಪ್ರಜಾಪತಿ ಜಾಮೀನಿಗೆ ‘ಸುಪ್ರೀಂ‘ ತಡೆ

Last Updated 21 ಸೆಪ್ಟೆಂಬರ್ 2020, 15:57 IST
ಅಕ್ಷರ ಗಾತ್ರ

ನವದೆಹಲಿ: ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಅವರಿಗೆ ಅಲಹಾಬಾದ್‌ ಹೈಕೋರ್ಟ್ ನೀಡಿದ್ದ ಎರಡು ತಿಂಗಳ ಮಧ್ಯಂತರ ಜಾಮೀನಿಗೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ.

ನ್ಯಾಯಮೂರ್ತಿಗಳಾದ ಅಶೋಕ್‌ ಭೂಷಣ್‌, ಆರ್‌. ಸುಭಾಷ್‌ ರೆಡ್ಡಿ ಮತ್ತು ಎಂ.ಆರ್‌. ಶಾ ಅವರೊನ್ನೊಳಗೊಂಡ ನ್ಯಾಯಪೀಠವು ಜಾಮೀನಿಗೆ ತಡೆ ನೀಡಿದೆ.

ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದಲ್ಲಿ ಪ್ರಜಾಪತಿ ಹಾಗೂ ಇತರರ ವಿರುದ್ಧ 2017ರಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT