<p class="title"><strong>ನವದೆಹಲಿ: </strong>ಉತ್ತರಾಖಂಡದಲ್ಲಿ ಜಿಮ್ ಕಾರ್ಬೆಟ್ ರಾಷ್ಟ್ರೀಯ ಉದ್ಯಾನದ ಹುಲಿ ಸಂರಕ್ಷಣಾ ಪ್ರದೇಶದ ವ್ಯಾಪ್ತಿಯಲ್ಲಿ ಬಸ್ಸುಗಳು ಮತ್ತು ಖಾಸಗಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸುವ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.</p>.<p class="title">ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ, ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ.ರಾಮಸುಬ್ರಹ್ಮಣಿಯನ್ ಅವರಿದ್ದ ಪೀಠವು ಕೇಂದ್ರ ಸರ್ಕಾರ, ಉತ್ತರಾಖಂಡ ಸರ್ಕಾರ ಮತ್ತು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರಕ್ಕೆ ನೋಟಿಸ್ ಜಾರಿ ಮಾಡಿತು.</p>.<p class="title">ಈ ಕುರಿತು ಅರ್ಜಿ ಸಲ್ಲಿಸಿದ್ದ ವಕೀಲ ಗೌರವ್ ಕುಮಾರ್ ಬನ್ಸಲ್, ಅವರು, ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸುವ ರಾಷ್ಟ್ರೀಯ ಉದ್ಯಾನ ಆಡಳಿತದ ನಿರ್ಧಾರ ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ಪ್ರತಿಪಾದಿಸಿದ್ದರು.</p>.<p class="title">ಈ ಆದೇಶ ಮೂಲಕ ಸಂಬಂಧಿತ ಅಧಿಕಾರಿಗಳು, ಖಾಸಗಿ ಬಸ್ಸುಗಳ ನಿರ್ವಹಣಾ ಸಂಸ್ಥೆಗಳಿಗೆ ಅನುಕೂಲಕರ ಆಗುವಂತೆ ನೋಡಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ: </strong>ಉತ್ತರಾಖಂಡದಲ್ಲಿ ಜಿಮ್ ಕಾರ್ಬೆಟ್ ರಾಷ್ಟ್ರೀಯ ಉದ್ಯಾನದ ಹುಲಿ ಸಂರಕ್ಷಣಾ ಪ್ರದೇಶದ ವ್ಯಾಪ್ತಿಯಲ್ಲಿ ಬಸ್ಸುಗಳು ಮತ್ತು ಖಾಸಗಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸುವ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.</p>.<p class="title">ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ, ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ.ರಾಮಸುಬ್ರಹ್ಮಣಿಯನ್ ಅವರಿದ್ದ ಪೀಠವು ಕೇಂದ್ರ ಸರ್ಕಾರ, ಉತ್ತರಾಖಂಡ ಸರ್ಕಾರ ಮತ್ತು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರಕ್ಕೆ ನೋಟಿಸ್ ಜಾರಿ ಮಾಡಿತು.</p>.<p class="title">ಈ ಕುರಿತು ಅರ್ಜಿ ಸಲ್ಲಿಸಿದ್ದ ವಕೀಲ ಗೌರವ್ ಕುಮಾರ್ ಬನ್ಸಲ್, ಅವರು, ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸುವ ರಾಷ್ಟ್ರೀಯ ಉದ್ಯಾನ ಆಡಳಿತದ ನಿರ್ಧಾರ ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ಪ್ರತಿಪಾದಿಸಿದ್ದರು.</p>.<p class="title">ಈ ಆದೇಶ ಮೂಲಕ ಸಂಬಂಧಿತ ಅಧಿಕಾರಿಗಳು, ಖಾಸಗಿ ಬಸ್ಸುಗಳ ನಿರ್ವಹಣಾ ಸಂಸ್ಥೆಗಳಿಗೆ ಅನುಕೂಲಕರ ಆಗುವಂತೆ ನೋಡಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>